ಮೈಸೂರು :
ಜಗದ್ವಿಖ್ಯಾತ ಮೈಸೂರು ದಸರಾಗೆ ಕೇವಲ ಎರಡು ವಾರಗಳು ಮಾತ್ರ ಬಾಕಿ ಇದ್ದು ರಾಜಮನೆತನದವರು ಅರಮನೆಯಲ್ಲಿ ದಸರಾ ಸಿದ್ಧತೆಯನ್ನು ಪ್ರಾರಂಭಿಸಿದ್ದಾರೆ.
ಈ ಹಿನೆಲೆಯಲ್ಲಿ ಅಕ್ಟೋಬರ್ ಒಂದರಂದು ಮೈಸೂರು ಅರಮನೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.
ಅಕ್ಟೋಬರ್ 1ರಂದು ಅಭಿಜಿತ್ ಲಗ್ನದಲ್ಲಿ ಸಿಂಹಾಸನ ಜೋಡಣಾ ಕಾರ್ಯ ಪ್ರಾರಂಭವಾಗಲಿದ್ದು ಇದಕ್ಕೂ ಮುನ್ನ ಹೋಮ-ಹವನ ನಡೆಸಲಾಗುತ್ತದೆ. ಕಲವೇ ಪ್ರಮುಖರ ಸಮ್ಮುಖದಲ್ಲಿ ಸಿಂಹಾಸನಾ ಜೋಡಣಾ ಕಾರ್ಯ ನಡೆಯಲಿದೆ. ಹಾಗಾಗಿ ಅಂದು ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/05/Mysore.gif)