ಮೈಸೂರು : ಎಲ್ಲಾ 88 ಸೋಂಕಿತರು ಗುಣಮುಖ!!

ಬೆಂಗಳೂರು: 

      ಮಾರಣಾಂತಿಕ ಕೊರೋನಾ ಸೋಂಕನ್ನು ಮೆಟ್ಟಿ ನಿಲ್ಲುವಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಯಶಸ್ವಿಯಾಗಿದೆ.

      ಜಿಲ್ಲೆಯಲ್ಲಿ ಜ್ಯುಬಿಲಿಯೆಂಟ್ ಕಾರ್ಖಾನೆಯ ನೌಕರನೋರ್ವನಿಗೆ ತಗುಲಿದ ಕೊರೋನಾ ಸೋಂಕು ಬರೋಬ್ಬರಿ 88 ಜನರಿಗೆ ವ್ಯಾಪಿಸಿತ್ತು. ರಾಜ್ಯದಲ್ಲೇ ಬೆಂಗಳೂರು ನಂತರದಲ್ಲಿ ಎರಡನೇ ಸ್ಥಾನ ಪಡೆದಿತ್ತು. ಇದರಿಂದ ಮೈಸೂರು ಕೆಂಪು ವಲಯ ಹಾಗೂ ಅತಿ ಸೂಕ್ಷ್ಮ ಜಿಲ್ಲೆಯಾಗಿ ಗುರುತಿಸಿಕೊಂಡಿತ್ತು.

      ಆದರೆ, ಕೆಲ ದಿನಗಳಿಂದ ಅಲ್ಲಿ ಯಾವುದೇ ಸೋಂಕು ಪತ್ತೆಯಾಗಿರಲಿಲ್ಲ. 88 ಸೋಂಕಿತರ ಪೈಕಿ ಎಲ್ಲರೂ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ. ಇದು ಜಿಲ್ಲಾಡಳಿತದ ಉತ್ತಮ ಕ್ರಮಗಳ ಫಲ ಎನ್ನಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ