ನಾರಾಯಣಪುರ : ನಕ್ಸಲೀಯರಿಂದ IED ಸ್ಫೋಟ …..!

ನಾರಾಯಣಪುರ:

    ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲೀಯರು ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಸ್ಫೋಟಿಸಿದ್ದು, ಪರಿಣಾಮ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ನ ಇಬ್ಬರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

   ಐಟಿಬಿಪಿಯ 53 ನೇ ಬೆಟಾಲಿಯನ್‌ನ ತಂಡವು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಕೊಹ್ಕಮೆಟಾ ಪೊಲೀಸ್ ಠಾಣೆ ವ್ಯಾಪ್ತಿಯ ಕುತುಲ್ ಗ್ರಾಮದ ಬಳಿಯ ಕಾಡಿನಲ್ಲಿ ಬೆಳಿಗ್ಗೆ 6.30 ರ ಸುಮಾರಿಗೆ ಐಇಡಿ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

    ಇಬ್ಬರು ಐಟಿಬಿಪಿ ಸಿಬ್ಬಂದಿಗಳು ಐಇಡಿ ಮೇಲೆ ಹೆಜ್ಜೆ ಹಾಕಿದ್ದು. ಈ ವೇಳೆ ಐಇಡಿ ಸ್ಫೋಟಗೊಂಡಿದೆ. ಪರಿಣಾಮ ಇಬ್ಬರು ಯೋಧರು ಗಾಯಗೊಂಡರು ಎಂದು ಹೇಳಿದ್ದಾರೆ.ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap