ವಿಶಾಖಪಟ್ಟಣಂ:
ವಿವಾದಿತ ಶ್ರೀರಾಮ ಮಂದಿರ ನಿರ್ಮಾಣ ಕುರಿತು ಮುಂದಿನ ತಿಂಗಳೊಳಗಾಗಿ ಸುಗ್ರೀವಾಜ್ಞೆ ಹೊರಡಿಸದಿದ್ದರೆ, ಇಲ್ಲದೇ ಹೋದರೆ ಮುಂಬರುವ ಚುನಾವಣೆಯಲ್ಲಿ ನಿಮ್ಮ ವಿರುದ್ಧ ನಾವೆ ಚುನಾವಣೆಗೆ ನಿಲ್ಲುತ್ತೇವೆ ಎಂದು ಕೇಂದ್ರ ಸರ್ಕಾರಕ್ಕೆ ವಿಶ್ವ ಹಿಂದು ಪರಿಷತ್ ಇಂದು ಎಚ್ಚರಿಕೆ ಸಂದೇಶ ರವಾನಿಸಿದೆ.
ವಿಹೆಚ್’ಪಿ ಜಂಟಿ ಪ್ರಧಾನ ಕಾರ್ಯದರ್ಶಿ ವೈ.ರಾಘವುಲು ತಿಳಿಸಿದ್ದಾರಲ್ಲದೇ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಸುಗ್ರೀವಾಜ್ಞೆ ಹೊರಡಿಸುವಂತೆ ಸಂಸತ್ತಿನ ಎಲ್ಲಾ ಸದಸ್ಯರು ಕೇಂದ್ರದ ಮೇಲೆ ಒತ್ತಡ ತರುವಂತೆ ಮಾಡಲಾಗುತ್ತದೆ. ಡಿಸೆಂಬರ್ ಒಳಗಾಗಿ ಸರ್ಕಾರ ಈ ಕುರಿತು ಸುಗ್ರೀವಾಜ್ಞೆ ಹೊರಡಿಸಿದೇ ಹೋದಲ್ಲಿ, ಮುಂದಿನ ಚುನಾವಣೆ ವೇಳೆ ವಿಹೆಚ್’ಪಿ ತೆಗೆದುಕೊಳ್ಳುವ ನಿರ್ಧಾರವನ್ನು ನಿಮಗೆ ತಡೆದುಕೊಳ್ಳಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರುಇಕೆಯ ಗಂಟೆ ರವಾನಿಸಿದ್ದಾರೆ ಎನ್ನಲಾಗಿದೆ.








