ನವದೆಹಲಿ:
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಚಿಕಿತ್ಸೆಗೆ ನಿನ್ನೆಯಿಂದ ನಿಧಾನವಾಗಿ ಸ್ಪಂದಿಸುತ್ತಿದ್ದು, ಅವರ ಅಂಗಾಂಗಗಳು ಸ್ಥಿರವಾಗಿವೆ ಎಂದು ಅವರ ಪುತ್ರ ಮಾಜಿ ಸಂಸದ ಅಭಿಜಿತ್ ಮುಖರ್ಜಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಆಗಸ್ಟ್ 10ರಂದು ತೀವ್ರ ಅನಾರೋಗ್ಯದಿಂದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೆಹಲಿಯ ಆರ್ಮಿ ರಿಸರ್ಚ್ ಅಂಡ್ ರೆಫರಲ್ ಹಾಸ್ಪಿಟಲ್ ಗೆ ದಾಖಲಾಗಿದ್ದರು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಅದರ ಶಸ್ತ್ರಚಿಕಿತ್ಸೆ ನೆರವೇರಿದೆ. ನಂತರ ಅವರಲ್ಲಿ ಕೊರೋನಾ ಪಾಸಿಟಿವ್ ಕೂಡ ಕಂಡುಬಂದಿತ್ತು. ಅದಕ್ಕೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನನ್ನ ತಂದೆ ಯಾವಾಗಲೂ ಹೋರಾಟಗಾರ. ಅವರು ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ. ಅವರ ಅಂಗಾಂಗಗಳೆಲ್ಲವೂ ಸ್ಥಿರವಾಗಿದೆ. ಅವರ ಆರೋಗ್ಯದ ಶೀಘ್ರ ಚೇತರಿಕೆಗೆ ನಾವೆಲ್ಲರೂ ಪ್ರಾರ್ಥಿಸೋಣ, ನಮಗೆ ಅವರ ಅಗತ್ಯವಿದೆ ಎಂದು ಅಭಿಜಿತ್ ಮುಖರ್ಜಿ ನಿನ್ನೆ ಟ್ವೀಟ್ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/08/Pranab-mukharjee.jpg)