ಭೀಮಾ ಕೋರೆಗಾಂವ್ ಹಿಂಸಾಚಾರ: ಮತ್ತೋಬ್ಬ ಹೋರಾಟಗಾರನ ಬಂಧನ…!!!

ಪುಣೆ:
       ದೇಶದಲ್ಲಿ ಬುದ್ದಿಜೀವಿಗಳು ಪರೋಕ್ಷವಾಗಿ ಬೆಂಬಲ ನೀಡಿ ನಡೆಸಿದ್ದಾರೆ ಎನ್ನಲಾದ ಭೀಮಾ ಕೋರೆಗಾಂವ್ ಪ್ರಕರಣ ಸಂಬಂಧ ಪುಣೆ ಪೊಲೀಸರು ಮತ್ತೋಬ್ಬ ಹೋರಾಟಗಾರನನ್ನು ಬಂಧಿಸಿದ್ದಾರೆ , ಇಂದು ಮುಂಜಾನೆ ಖ್ಯಾತ ದಲಿತಪರ ಹೋರಾಟಗಾರ ಆನಂದ್ ತೆಲ್ತುಂಬೆಡ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ .
       ಆನಂದ್ ಅವರ ನಿವಾಸದಿಂದಲೇ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ, ಇಂದು ನ್ಯಾಯಾಧೀಶರ ಮುಂದೆ ಅವರನ್ನು ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ನು ಇತ್ತೀಚೆಗಷ್ಟೇ ಪುಣೆ ನ್ಯಾಯಾಲಯ ಆನಂದ್ ತೆಲ್ತುಂಬೆಡ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು. 
         ಪುಣೆ ಪೊಲೀಸ್ ಮೂಲಗಳು ತಿಳಿಸಿರುವಂತೆ ಭೀಮಾ ಕೋರೆಗಾಂವ್ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳು ಹೋರಾಟಗಾರ ಆನಂದ್ ತೆಲ್ತುಂಬೆಡ್ ಅವರ ವಿರುದ್ಧ ಪ್ರಬಲ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ಈ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೂ ಸಲ್ಲಿಕೆ ಮಾಡಿದ್ದು, ಇದೇ ಕಾರಣಕ್ಕೆ ಪುಣೆ ನ್ಯಾಯಾಲಯ ಆನಂದ್ ತೆಲ್ತುಂಬೆಡ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ ಎನ್ನಲಾಗಿದೆ.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap