ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ : 6 ಸಾವು..!

ತಮಿಳು ನಾಡು:

    ಪಟಾಕಿ ಕಾರ್ಖಾನೆಯಲ್ಲಿ ದುರಂತ ಮತ್ತೆ ಸಂಭವಿಸಿದೆ. ತಮಿಳು ನಾಡಿನ ಕದ್ದಲೂರು ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿ 6 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

     ರಾಜಧಾನಿ ಚೆನ್ನೈಯಿಂದ 190 ಕಿಲೋ ಮೀಟರ್ ದೂರದಲ್ಲಿ ಕದ್ದಲೂರು ಜಿಲ್ಲೆಯ ಕಟ್ಟುಮನ್ನರ್ಕೊಯ್ಲ್ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು ಸ್ಫೋಟಕ್ಕೆ ಕಾರಣವೇನು ಎಂಬುದನ್ನು ತನಿಖಾ ತಂಡ ಪತ್ತೆಹಚ್ಚುವ ಕಾರ್ಯದಲ್ಲಿ ನಿರತವಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದ್ದು ಹೆಚ್ಚಿನ ಮಾಹಿತಿ ಸಿಗಬೇಕಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link