ಕೇಂದ್ರ ಸಚಿವರ ವಿರುದ್ದ ಪ್ರಕರಣ ದಾಖಲು..!!

ನವದೆಹಲಿ:

     ಉತ್ತರ ಭಾರತದಲ್ಲಿ ಜನರಲ್ಲಿ ಕೌಸಲ್ಯದ ಕೊರತೆ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ವಿರುದ್ಧ ಬಿಹಾರದ ನ್ಯಾಯಾಲಯವೊಂದರಲ್ಲಿ ಪ್ರಕರಣ ದಾಖಲಾಗಿದೆ.ಮುಜಾಪ್ಪರ್ ಪುರ್ ನ ಚೀಫ್ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಸಾಮಾಜಿಕ ಕಾರ್ಯಕರ್ತ ತಮನ್ನಾ ಹಸ್ಮಿ ಎಂಬವರು ದೂರು ದಾಖಲಿಸಿದ್ದಾರೆ.

   ಉತ್ತರ ಭಾರತದಲ್ಲಿ ಜನರಲ್ಲಿ ಕೌಶಲ್ಯದ ಕೊರತೆ ಎದ್ದು ಕಾಣುತ್ತದೆ ಎಂಬ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರು ಹೇಳಿಕೆಯಿಂದ ು.ಭಾರತದ ಜನರನ್ನು ಅವಮಾನ ಮಾಡಿದ್ದಾರೆ ಎಂದು ಹಸ್ಮಿ ದೂರಿನಲ್ಲಿ ತಿಳಿಸಿದ್ದಾರೆ. ಐಪಿಸಿ ಸೆಕ್ಷನ್ 295 ( ಯಾವುದೇ  ಧರ್ಮದ ಅಪಮಾನ) 405 ( ನಂಬಿಕೆ ಉಲ್ಲಂಘನೆ ಅಪರಾಧ) 153 ( ಹಿಂಸೆಗೆ ಪ್ರಚೋದನೆ) ಮತ್ತಿತರ ಸೆಕ್ಷನ್ ಗಳ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಸೆಪ್ಟೆಂಬರ್ 25 ರಂದು ಈ ಪ್ರಕರಣದ ವಿಚಾರಣೆ ನಡೆಯುವ ಸಾಧ್ಯತೆ ಇದೆ ವರದಿಯಾಗಿದೆ. 

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap