ನವದೆಹಲಿ:
ಎನ್ ಪಿ ಆರ್ ಅಧಿಕಾರಿಗಳು ಬಂದಾಗ ಸುಳ್ಳು ಮಾಹಿತಿ ನೀಡಿ ಎಂದು ಜನರಗೆ ಒತ್ತಾಯಿಸಿದ ಆರೋಪದ ಮೇರೆಗೆ ಲೇಖಕಿ ಹಾಗೂ ಹೋರಾಟಗಾರ್ತಿ ಅರುಂಧತಿ ರಾಯ್ ಅವರ ವಿರುದ್ಧ ಸುಪ್ರೀಂಕೋರ್ಟ್ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.
ಅರುಂಧತಿ ರಾಯ್ ಅವರ ಹೇಳಿಕೆ ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ವಾದ ಕೃತ್ಯವಾಗಿದೆ ಎಂದು ವಕೀಲ ರಾಜೀವ್ ಕುಮಾರ್ ರಂಜನ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಐಪಿಸಿಯ ವಿವಿಧ ಸೆಕ್ಷನ್ ಹಾಗೂ ಕಿಡಿಗೇಡಿತನ, ಶಾಂತಿ ಉಲ್ಲಂಘನೆ, ಗಲಭೆ ಉಂಟುಮಾಡುವ ಉದ್ದೇಶ ಮತ್ತು ಕ್ರಿಮಿನಲ್ ಪಿತೂರಿಯಂತಹ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ದೆಹಲಿಯ ತಿಲಕ್ ಮಾರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ ಶಿಕ್ಷೆ ನೀಡುವಂತೆ ಕೋರಲಾಗಿದೆ. ಇದರಿಂದ ಅರುಂಧತಿ ರಾಯ್ ಮುಂದೆ ಇಂತಹ ಹೇಳಿಕೆ ನೀಡದಂತೆ ಪಾಠ ಕಲಿಯಲಿದ್ದಾರೆ ಎಂದು ರಂಜರ್ ಹೇಳಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/12/Writer-activist_Arundhati_Roy.gif)