ಕನ್ಹಯ್ಯ ಕುಮಾರ್ ವಿರುದ್ಧ ಕಾನೂನು ಕ್ರಮ : ಸರ್ಕಾರದ ವಿರುದ್ಧ ಚಿದಂಬರಂ ಕಿಡಿ

ನವದೆಹಲಿ

      ಕೆಲ ವರ್ಷಗಳ ಹಿಂದೆ ನಡೆದಿತ್ತು ಎನ್ನಲಾದ ಘಟನೆ ಆಧರಿಸಿ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕನ್ಹಯ್ಯ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಒಪ್ಪಿಗೆ ನೀಡಿದ ದೆಹಲಿ ಸರ್ಕಾರದ ಕ್ರಮವನ್ನು ಮಾಜಿ ಕೇಂದ್ರ ಹಣಕಾಸು ಸಚಿವ ಹಾಗು ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಟೀಕಿಸಿದ್ದಾರೆ.

     ರಾಜದ್ರೋಹ ಪ್ರಕರಣದ ಬಗ್ಗೆ ಅರ್ಥ ಮಾಡಿಕೊಳ್ಳುವಲ್ಲಿ ಕೇಂದ್ರ ಸರ್ಕಾರಕ್ಕಿಂತ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರವು ಹಿಂದೆ ಉಳಿದಿದೆ. ಕನ್ಹಯ್ಯ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 124ಎ ಮತ್ತು 120ಬಿ ಅಡಿಯಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲು ಅನುಮತಿ ನೀಡಿದ ದೆಹಲಿ ಸರ್ಕಾರದ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಮಾಜಿ ಸಚಿವ ಪಿ.ಚಿದಂಬರಂ ಟ್ವೀಟ್ ಮಾಡಿದ್ದಾರೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap