ನವದೆಹಲಿ:
ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರನ್ನು ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದು ಅವರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸಲು ಆದೇಶಿಸಿದೆ.
ದೆಹಲಿಯ ವಿಶೇಷ ನ್ಯಾಯಾಲಯ ಚಿದಂಬರಂ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ ಈ ಹಿನ್ನೆಲೆಯಲ್ಲಿ ಚಿದಂಬರಂ ಅವರನ್ನು ಸೆಪ್ಟೆಂಬರ್ 19ರವರೆಗೆ ತಿಹಾರ್ ಜೈಲಿನಲ್ಲಿ ಇಡಲಾಗುತ್ತಿದೆ ಎಂದು ಆದೇಶ ನೀಡಿದೆ.
ಪ್ರಕರಣ ಸಂಬಂಧ ಎರಡು ದಿನಗಳ ಸಿಬಿಐ ಕಸ್ಟಡಿ ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ದೆಹಲಿ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದು ತಿಹಾರ್ ಜೈಲಿನಲ್ಲಿ ವಿಶೇಷ ಕೊಠಡಿಯಲ್ಲಿಡಲು ಸೂಚಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/09/Untitled-1-1.gif)