ನವದೆಹಲಿ:
ಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆಯ ಬಳಿ ಭಾರತೀಯ ಸೇನೆಯ ಗಸ್ತು ಮತ್ತು ನಿಲುಗಡೆಯನ್ನು ತಡೆಯಲು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ಎ)ಸಾಕಷ್ಟು ಪ್ರಯತ್ನಿಸುತ್ತಿದೆ. ಆದರೆ ಜಗತ್ತಿನಲ್ಲಿರುವ ಯಾವುದೇ ಶಕ್ತಿಯು ಭಾರತೀಯ ಸೈನಿಕರನ್ನು ತಡೆಯಲು ಸಾಧ್ಯವಿಲ್ಲ, ನಮ್ಮ ಸೈನಿಕರ ನಿಲುಗಡೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆಯಲ್ಲಿ ಮುಂದುವರಿದಿರುವ ಭಾರತ-ಚೀನಾ ಸೇನೆ ನಿಲುಗಡೆ ಸಂಬಂಧ ಇಂದು ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ ಅವರು, ಭಾರತೀಯ ಸೇನೆಯ ಸಾಂಪ್ರದಾಯಿಕ ಮತ್ತು ಗಸ್ತು ಮಾದರಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದರು.
![](https://prajapragathi.com/wp-content/uploads/2020/09/THJC-LADAKHARMYCHINA-2.gif)