JNU ಎರಡು ವರ್ಷ ಬಂದ್ ಮಾಡಿ : ಸ್ವಾಮಿ

ನವದೆಹಲಿ:

    ಜೆಎನ್ ಯು ನಲ್ಲಿ ನಡೆದಿರುವ ಹಿಂಸಾಚಾರದ ಕುರಿತಂತೆ ಪ್ರತಿಕ್ರಿಯೇ ನೀಡಿರುವ ಸುಬ್ರಮಣಿಯನ್ ಸ್ವಾಮಿ ಅವರು ಈ ಹಿಂಸಾಚಾರಗಳಿಗೆ ಕೊನೆ ಹಾಡಬೇಕಾದರೆ ಎರಡು ವರ್ಷಗಳ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯವನ್ನು ಬಂದ್ ಮಾಡಬೇಕು ಎಂದು ಹೇಳಿದ್ದಾರೆ.

   ದೇಶದ ಪ್ರತಿಷ್ಠಿತ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು)ದ ಕ್ಯಾಂಪಸ್‌ ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಖಾಸಗಿ ಸುದ್ದಿವಾಹಿನಿಯೊಂದಿಗೆ ಪ್ರತಿಕ್ರಿಯೆ ನೀಡಿರುವ ಸುಬ್ರಮಣಿಯನ್ ಸ್ವಾಮಿ, ವಿಪಕ್ಷಗಳ ವಿರುದ್ಧ ತೀವ್ರ ಕಿಡಿಕಾರಿದರು. ಜೆಎನ್ ಯು ಹಿಂಸಾಚಾರಕ್ಕೆ ವಿರೋಧ ಪಕ್ಷಗಳೇ ಕಾರಣ ಎಂದು ಹೇಳಿದ ಸ್ವಾಮಿ, ಜೆಎನ್ ಯು ವಿದ್ಯಾರ್ಥಿಗಳ ಹೋರಾಟವನ್ನು ರಾಜಕೀಯ ಪಕ್ಷಗಳು ತಮ್ಮ ರಾಜಕೀಯ ಹಿಸಾಕ್ತಿಗಾಗಿ ಹೈಜಾಕ್ ಮಾಡಲು ಯತ್ನಿಸಿದ ಪರಿಣಾಮವೇ ಇಂದು ಅಲ್ಲಿ ಹಿಂಸಾಚಾರ ನಡೆದಿದೆ. ವಿಪಕ್ಷಗಳಿಗೆ ಸರ್ಕಾರವನ್ನು ಟೀಕಿಸಲು ಒಂದಿಲ್ಲೊಂದು ಕಾರಣ ಬೇಕಿದೆ. ಯಾವುದೂ ಸಿಗದೇ ಇದ್ದಾಗ ತಾವೇ ಕಾರಣವನ್ನು ಸೃಷ್ಟಿಸಲು ಮುಂದಾಗಿವೆ ಎಂದು ಕಿಡಿಕಾರಿದ್ದಾರೆ.

    ಅಂತೆಯೇ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ವೇದಿಕೆಯಾಗಬೇಕಿದ್ದ ಕ್ಯಾಂಪಸ್ ಇಂದು ರಾಜಕೀಯ ಜಿದ್ದಾಜಿದ್ದಿಗೆ ವೇದಿಕೆಯಾಗಿರುವುದು ನಿಜಕ್ಕೂ ಆಘಾತಕಾರಿ. ಹೀಗಾಗಿ ಜೆಎನ್ ಯು ಪ್ರಾಧ್ಯಪಕರು 3 ತಿಂಗಳ ಕಾಲ ಕ್ಯಾಂಪಸ್ ಗೆ ಆಗಮಿಸದಂತೆ ನಿಷೇಧ ಹೇರಿ, ವಿವಿಯನ್ನು 2 ವರ್ಷಗಳ ಕಾಲ ಸ್ಥಗಿತಗೊಳಿಸಬೇಕು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಬೇರೆ ವಿವಿಗಳಿಗೆ ವರ್ಗಾವಣೆ ಮಾಡಬೇಕು ಎಂದು ಸ್ವಾಮಿ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap