ಲಕ್ನೋ:
ಮೈತ್ರಿ ಪಕ್ಷಗಳ ನಿರ್ವಹಣೆ ಹಾಗೂ ಸಮ್ಮಿಶ್ರ ಸರ್ಕಾರವನ್ನು ಹೇಗೆ ಮುನ್ನಡೆಸಬೇಕು ಎಂಬ ಸೂಕ್ಷ್ಮ ವಿಚಾರಗಳನ್ನು ಕಾಂಗ್ರೆಸ್ ಬಿಜೆಪಿಯಿಂದ ಕಲಿಯಬೇಕು ಎಂದು ಅಖಿಲೇಶ್ ಯಾದವ್ ಅಭಿಪ್ರಾಯ ಪಟ್ಟಿದ್ದಾರೆ.
ಬಿಜೆಪಿ ಮುಖಂಡರಿಗೆ ಯಾವ ಪಕ್ಷದ ಮುಖಂಡರನ್ನು ಯಾವಾಗ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಅಂತ ಗೊತ್ತಿದೆ. ಮೈತ್ರಿ ಸರ್ಕಾರ ಇದ್ದಲ್ಲಿ ಏರಿಳಿತಗಳು ಸಾಮಾನ್ಯ. ಇವೆಲ್ಲದರ ನಡುವೆಯೂ ಬಿಜೆಪಿ ನೇತೃತ್ವ ವಹಿಸಿದವರು ಅದನ್ನೆಲ್ಲ ಸಂಬಾಳಿಸಿಕೊಂಡು, ಸರ್ಕಾರ ನಡೆಸುತ್ತಾರೆ.
ಮೈತ್ರಿ ಮಾಡಿಕೊಂಡ ಮೇಲೆ ತನ್ನ ಕೆಲವು ಸೀಟುಗಳನ್ನು ಬಿಟ್ಟು ಕೊಟ್ಟಾದರೂ ಸರ್ಕಾರ ಉಳಿಸಿಕೊಳ್ಳಬೇಕು ಎಂಬ ನೀತಿಯನ್ನು ಬಿಜೆಪಿ ಪಾಲಿಸುತ್ತೆ. ಮಿತ್ರಪಕ್ಷಗಳ ಎಲ್ಲಾ ಒತ್ತಡಗಳನ್ನೂ ಸಹಿಸಿಕೊಂಡು ಮೈತ್ರಿ ಉಳಿಸಿಕೊಳ್ಳುವಲ್ಲಿ ಬಿಜೆಪಿ ಪಕ್ಷ ಯಶಸ್ವಿಯಾಗಿದೆ ಎಂದು ಮಾಧ್ಯಮವೊಂದರ ಸಂದರ್ಶನದಲ್ಲಿ ಅಖಿಲೇಶ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/akhilesh-yadav.gif)