ಸಿಆರ್ ಪಿಎಫ್ ಮುಖ್ಯಸ್ಥರಿಗೂ ಅಂಟಿದ ಕೊರೋನಾ..!

ನವದೆಹಲಿ:

     ದೇಶಾದ್ಯಂತ ಮಾರಕ ಕೊರೋನಾ ಸೋಂಕು ಹರಡುತ್ತಿದ್ದು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್) ಮುಖ್ಯಸ್ಥರಿಗು ಇದೇ ಎಂದು ತಿಳಿದು ಬಂದಿದೆ

     ಸಿಆರ್ ಪಿಎಫ್ ಡಿಜಿ ಎಪಿ ಮಹೇಶ್ವರಿ ಅವರಿಕೆ ಸೋಂಕು ತಗುಲಿದ ಕಾರಣ ಅವರು ಸ್ವಯಂ  ದಿಗ್ಭಂಧನ ಹೇರಿಕೊಂಡಿದ್ದಾರೆ. 

    ಮೂಲಗಳ ಪ್ರಕಾರ ಸಿಆರ್ ಪಿಎಫ್ ಡಿಜಿ ಎಪಿ ಮಹೇಶ್ವರಿ ಮತ್ತು ಕೇಂದ್ರ ಸಚಿವ ಕೆ ವಿಜಯ್ ಕುಮಾರ್ ಅವರು ಇತ್ತೀಚಿಗೆ ನಕ್ಸಲ್ ಪೀಡಿತ ಛತ್ತೀಸ್ ಗಢಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದರು. ಈ ಇಬ್ಬರೊಂದಿಗೆ ಸುಮಾರು  24ಕ್ಕೂ ಅಧಿಕ ಮಂದಿ ಅಧಿಕಾರಿಗಳು ಸಭೆಯಲ್ಲಿ ಪಾಲ್ದೊಂಡಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕೆ ವಿಜಯ್ ಕುಮಾರ್ ಸೇರಿದಂತೆ ಸಂಪರ್ಕದಲ್ಲಿದ್ದ 24ಕ್ಕೂ ಹೆಚ್ಚು ಅಧಿಕಾರಿಗಳನ್ನು ಗುರುತಿಸಿ, ಅವರ ಸಂಪರ್ಕದಲ್ಲಿದ್ದವರನ್ನೂ ಗುರುತಿಸಿ ಕ್ವಾರಂಟೈನ್ ಮಾಡಲಾಗಿದೆ.

    ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಎಪಿ ಮಹೇಶ್ವರಿ ಅವರು ತಮಗೆ ಕೊರೋನಾ ವೈರಸ್ ಸೋಂಕು ತಗುಲಿದ್ದು, ಈ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಹೀಗಾಗಿ ತಾವು ಮುಂಜಾಗ್ರತಾ ಕ್ರಮವಾಗಿ ಸ್ವಯಂ ದಿಗ್ಭಂಧನದಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap