ನವದೆಹಲಿ:
ಭಾರತದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆಸಿದ್ದು, ಸೋಂಕಿನಿಂದ ಬಳಲುತ್ತಿದ್ದ ಕೇರಳ ವ್ಯಕ್ತಿ ಮಂಗಳವಾರ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ವೈರಸ್’ಗೆ ಬಲಿಯಾದವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.
ಮೃತ ವ್ಯಕ್ತಿಯನ್ನು ಅಬ್ದುಲ್ ಅಜೀಜ್ (68) ಎಂದು ಗುರ್ತಿಸಲಾಗಿದ್ದು, ಭಾನುವಾರವಷ್ಟೇ ಇವರಲ್ಲಿ ವೈರಸ್ ದೃಢಪಟ್ಟಿತ್ತು. ಬಳಿಕ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ಅವರು, ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಇವರ ಸಾವಿನೊಂದಿಗೆ ಕೇರಳ ರಾಜ್ಯದಲ್ಲಿ ವೈರಸ್ ನಿಂದ ಸಾವಿಗೀಡಾದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.
![](https://prajapragathi.com/wp-content/uploads/2020/03/corona-000.gif)