ಡಿಕೆ ಶಿವಕುಮಾರ್ ಗೆ ಮತ್ತೆ ಇಡಿ ಸಮನ್ಸ್..!

ನವದೆಹಲಿ

    ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಕಾಂಗ್ರೆಸ್ ನ ಹಿರಿಯ ನಾಯಕ ಹಾಗು ಕನಕಪುರದ ಶಾಸಕ ಡಿ.ಕೆ.ಶಿವಕುಮಾರ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.ಜನವರಿ 13 ರಂದು ದೆಹಲಿಗೆ ಬಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದ್ದು, 2013-14 ರ ಆರ್ಥಿಕ ವ್ಯವಹಾರದ ಮಾಹಿತಿಯನ್ನು ತರುವಂತೆ ಸೂಚಿಸಿದೆ ಎನ್ನಲಾಗಿದೆ.

    ತಮ್ಮ ಮೇಲೆ ಐಟಿ ಹೂಡಿರುವ ಪ್ರಕರಣಗಳ್ನು ರದ್ದು ಮಾಡಬೇಕೆಂದು ಡಿ.ಕೆ.ಶಿವಕುಮಾರ್ ಇತ್ತೀಚೆಗಷ್ಟೆ ಹೈಕೋರ್ಟ್ ಮೆಟ್ಟಿಲೇರಿದ್ದರು, ಇದಾದ ಕೆಲವೇ ದಿನಗಳಲ್ಲಿ ಈಗ ಇಡಿ ಸಮನ್ಸ್‌ ನೀಡಿರುವುದು ದೊಡ್ಡ ಶಾಕ್ ನೀಡಿದಂತಾಗಿದೆ.

    ಕಳೆದ ವರ್ಷ ಸೆಪ್ಟೆಂಬರ್ 03 ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿ, ಐವತ್ತು ದಿನಗಳ ಕಾಲ ತಿಹಾರ್ ಜೈಲಿನಲ್ಲಿಟ್ಟಿದ್ದರು. ಡಿ.ಕೆ.ಶಿವಕುಮಾರ್ ಅವರಿಗೆ ಅಕ್ಟೋಬರ್ 23 ರಂದು ಜಾಮೀನು ದೊರೆತಿತ್ತು. ಈಗ ಅದೇ ಇಡಿ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್‌ ನೀಡಿರುವುದು ಆತಂಕಕ್ಕೆ ಕಾರಣವಾಗಿದೆ. ಇಡಿಯು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಚುರುಕಾಗಿ ನಡೆಸುತ್ತಿತ್ತು, ಈಗ ಹೊಸ ಸಾಕ್ಷ್ಯ ದೊರಕಿರುವ ಕಾರಣ ಸಮನ್ಸ್‌ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap