ಮಹಾರಾಷ್ಟ್ರ:
ಕೇಂದ್ರ ಸಚಿವ ನಿತಿನ್ ಗಡ್ಕರಿ ಮಹಾರಾಷ್ಟ್ರದ ಅಹ್ಮದ್ ನಗರದಲ್ಲಿ ನಡೆದ ಸಮಾರಂಭದಲ್ಲಿ ಅಸ್ವಸ್ತರಾಗಿ ವೇದಿಕೆಯಲ್ಲಿ ರಾಷ್ಟ್ರಗೀತೆ ಹಾಡುವ ಸಂದರ್ಭದಲ್ಲಿ ಕುಸಿದು ಬಿದ್ದಿದ್ದಾರೆ.
ಮಹಾತ್ಮ ಫುಲೆ ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ,ತಮ್ಮ ಭಾಷಣ ಮುಗಿಸಿ ಕುಳಿತುಕೊಂಡಿದ್ದರು. ಆಮೇಲೆ ರಾಷ್ಟ್ರಗೀತೆಗಾಗಿ ನಿಂತುಕೊಂಡಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಅವರ ಕಣ್ಣಿಗೆ ಮಂಜು ಕವಿದಂತಾಗಿ ಹಠಾತ್ ಕುಸಿದು ಬಿದ್ದಿದ್ದು, ರಕ್ತದಲ್ಲಿನ ಸಕ್ಕರೆ ಅಂಶ ಹಠಾತ್ ಇಳಿಮುಖ (ಲೋ ಶುಗರ್) ವಾದ ಕಾರಣ ಅವರು ನಿತ್ರಾಣಗೊಂಡರು ಎನ್ನಲಾಗಿದ್ದು, ಪಕ್ಕದಲ್ಲಿದ್ದ ಭದ್ರತಾ ಸಿಬ್ಬಂದಿ ಅವರ ನೆರವಿಗೆ ಧಾವಿಸಿ ಉಪಚರಿಸಿದರು.
ನಂತರ ಗಡ್ಕರಿಯವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು. ಚೇತರಿಸಿಕೊಂಡ ನಂತರ ಅವರು ಶಿರಡಿಗೆ ತೆರಳಿದರು ಎಂದು ವರದಿಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/vst-nitin-gadkari-faint-ful.gif)