ಶಾರದಾ ಚಿಟ್ ಫಂಡ್ ಹಗರಣ : ವಿಶ್ವಾಸಾರ್ಹ ಸಾಕ್ಷಿ ನೀಡಲು ಸಿಬಿಐಗೆ ಸುಪ್ರೀಂ ಸೂಚನೆ..!!

ನವದೆಹಲಿ:
   ದೇಶದಲ್ಲಿ ಭಾರಿ ಸುದ್ದಿ ಮಾಡಿರುವ ಪ.ಬಂಗಾಳದ ಶರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಕೋಲ್ತತಾದ ಮಾಜಿ ಪೊಲೀಸ್ ಆಯುಕ್ತರಾದ ರಾಜೀವ್ ಕುಮಾರ್ ಅವರ ವಿರುದ್ಧ ‘ವಿಶ್ವಾಸಾರ್ಹ’ ಸಾಕ್ಷಿಗಳನ್ನು ಸಲ್ಲಿಕೆ ಮಾಡಿ ಎಂದು ಸಿಬಿಐಗೆ ಸೂಚನೆ ನೀಡಿದೆ.
    ಇಂದು ನಡೆದ ವಿಚಾರಣೆಯಲ್ಲಿ ಇಂತಹುದೊಂದು ನಿರ್ದೇಶನವನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ನೀಡಿದ್ದು, ರಾಜೀವ್ ಕುಮಾರ್ ಅವರನ್ನು ಪೊಲೀಸ್ ವಶದಲ್ಲಿಟ್ಟುಕೊಂಡು ವಿಚಾರಣೆ ನಡೆಸಲು ಅವರ ವಿರುದ್ಧ ಇರುವ ‘ವಿಶ್ವಾಸಾರ್ಹ’ ಸಾಕ್ಷಿಗಳನ್ನು ಸಲ್ಲಿಕೆ ಮಾಡಿ ಎಂದು ಸೂಚನೆ ನೀಡಿ ಆದೇಶ ಹೊರಡಿಸಿದೆ.
     ಹಗರದಣಲ್ಲಿ ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ಅವರ ಪಾತ್ರದ ಕುರಿತು ಸಿಬಿಐ ಸಾಬೀತು ಪಡಿಸಬೇಕು. ಆ ಬಳಿಕವಷ್ಟೇ ಅವರನ್ನು ಪೊಲೀಸ್ ವಶಕ್ಕೆ ನೀಡಿ ವಿಚಾರಣೆಗೆ ಅವಕಾಶ ನೀಡಲಾಗುತ್ತದೆ ಎಂದು ಕೋರ್ಟ್ ಹೇಳಿದೆ. ಅಂತೆಯೇ ಪ್ರಕರಣಕ್ಕೆ ಸಂಬಂಧಪಟ್ಟ ಹಾರ್ಡ್ ಡಿಸ್ಕ್ , ಲ್ಯಾಪ್ ಟಾಪ್, ಮೊಬೈಲ್ ಫೋನ್ ಗಳು ಮತ್ತಿತರೆ ವಸ್ತುಗಳನ್ನು ಸಾಕ್ಷಿ ನೀಡಬೇಕು ಎಂದು ಸೂಚಿಸಿದೆ.
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link