ನಾನು ಸಿಬಿಐ ಕಸ್ಟಡಿಯಲ್ಲಯೇ ಇರುತ್ತೇನೆ : ಚಿದಂಬರಂ

ನವದೆಹಲಿ:

  ಐಎನ್ಎಕ್ಸ್ ಮೀಡಿಯಾ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವ ಪಿ ಚಿದಂಬರಂ ಸೆ.02 ರ ವರೆಗೆ ಸಿಬಿಐ ವಶದಲ್ಲೇ ಿರುತ್ತೇನೆ ಎಂದು  ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ. 

   ಈಗ ಅವಧಿ ಮುಕ್ತಾಯಗೊಂಡಿದ್ದು, ಮತ್ತೆ ಕೋರ್ಟ್ ಎದುರು ಹಾಜರುಪಡಿಸಲಾಗುತ್ತದೆ. ಆದರೆ ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿರುವ ಚಿದಂಬರಂ ಪರ ವಕೀಲರು ಸೆ.2ರ ವರೆಗೆ ಸಿಬಿಐ ವಶದಲ್ಲೇ ಇರಲು ಚಿದಂಬರಂ ಗೆ ಅನುಮತಿ ನೀಡಬೇಕೆಂದು ಕೋರಿದ್ದಾರೆ. 

  ಆರ್. ಭಾನುಮತಿ ಹಾಗೂ ಎಎಸ್ ಬೋಪಣ್ಣ ಅವರಿದ್ದ ವಿಭಾಗೀಯ ಪೀಠದೆದುರು ಚಿದಂಬರಂ ಈ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣಾಧೀನ ನ್ಯಾಯಾಲಯ ತಮ್ಮನ್ನು ಸಿಬಿಐ ವಶಕ್ಕೆ ನೀಡಿರುವುದು ಹಾಗೂ ನಿರೀಕ್ಷಣಾ ಜಾಮೀನನ್ನು ನಿರಾಕರಿಸಿ ರುವುದನ್ನು ಪ್ರಶ್ನಿಸಿ ಚಿದಂಬರಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸೆ.2 ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಸೆ.02 ವರೆಗೆ ಸಿಬಿಐ ವಶದಲ್ಲೇ ಇರುತ್ತೇನೆ ಎಂಬ ಚಿದಂಬರಂ ಮನವಿ ಬಗ್ಗೆ ಕೋರ್ಟ್ ಇನ್ನೂ ಯಾವುದೇ ಪ್ರಕ್ರಿಯೆ ನೀಡಿಲ್ಲ ಎಂದು ತಿಳಿದು ಬಂದಿದೆ. 

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap