ನವದೆಹಲಿ:
ರಾಷ್ಟ್ರದ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವವರೆಗೂ ಮೋದಿಗೆ ವಿಶ್ರಾಂತಿ ತೆಗೆದುಕೊಳ್ಳಲು ನಾನು ಬಿಡುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ರೈತ ಜಾಥಾದಲ್ಲಿ ಹೇಳಿದ್ದಾರೆ.
ತನ್ನ ಆಡಳಿತವಿರುವ ಮಧ್ಯಪ್ರದೇಶ ಹಾಗೂ ಛತ್ತೀಸ್ಗಢದಲ್ಲಿ ರೈತರ ಸಾಲ ಮನ್ನಾ ಮಾಡಿಸಿ ಸುದ್ದಿಗಾರೊಂದಿಗೆ ಮಾತನಾಡಿರುವ ರಾಗಾ ನಾವು ಸಾಲ ಮನ್ನಾಕ್ಕೆ ಶಕ್ತರಾದರೆ ಕೇಂದ್ರ ಸರ್ಕಾರ ಕೂಡ ಮಾಡಲಿ ಎಂದು ಸವಾಲೆಸಿದ್ದಾರೆ.
ಕಾಂಗ್ರೇಸ್ ರೈತರ ಪರ ನಿಂತಿದ್ದು ಸಾಲ ಮನ್ನಾ ಮಾಡುವವರೆಗೂ ಪ್ರಧಾನಿ ಮೋದಿಯವರನ್ನು ನಾವು ಶಾಂತವಾಗಿರಲು ಎಂದೂ ಬಿಡುವುದಿಲ್ಲ ಎಂದು ಹೇಳಿದ್ದಾರೆ. ರೈತರ ಸಾಲ ಮನ್ನಾ ಮಾಡುವಂತೆ ಮಹಾಘಟಬಂಧನ್ ಆಗ್ರಹ ಮಾಡಲಿದೆ ಎಂದು ತಿಳಿಸಿದ್ದಾರೆ. ನೀವು ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರಧಾನಮಂತ್ರಿಗಳು ರೈತರ ಸಾಲ ಮನ್ನಾ ಕುರಿತಂತೆ ಯಾವುದೇ ರೀತಿಯ ಬೆಳವಣಿಗೆ ಆಗಿಲ್ಲ ಎಂದು ಟೀಕಿಸಿದ್ದಾರೆ.