ಕೊರೋನಾ ಸಮೀಕ್ಷೆ ನಡೆಸಲು ರಾಜ್ಯಗಳಿಗೆ ಐಸಿಎಂಆರ್ ಸೂಚನೆ..!

ನವದೆಹಲಿ:

    ದೇಶದಲ್ಲಿ  ಕೊರೋನಾ ಸೋಂಕಿಗೆ ತುತ್ತಾಗಿಯೂ ಲಕ್ಷಣರಹಿತ ವ್ಯಕ್ತಿಗಳ ಮೌಲ್ಯಮಾಪನಕ್ಕಾಗಿ ಕೇಂದ್ರದ ಆರೋಗ್ಯ ಸಂಶೋಧನಾ ಸಂಸ್ಥೆ ಐಸಿಎಂಆರ್ ಕೊರೋನಾ ಸಮೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಸಲಹೆ ಮಾಡಿದೆ.

    ಈ ಹಿಂದೆ ಎಷ್ಟು ಮಂದಿ ಕೊರೋನಾ ಸೋಂಕಿಗೆ ತುತ್ತಾದರು ಮತ್ತು ಇಂದು ಎಷ್ಟು ಮಂದಿ ಗುಣಮುಖರಾಗಿದ್ದಾರೆ ಎಂದು ಪತ್ತೆಹಚ್ಚಲು ರಕ್ತ ಪರೀಕ್ಷೆ ಮಾಡಿಸುವ ಪ್ರಯೋಗವನ್ನು ಈ ಸಮೀಕ್ಷೆ ಒಳಗೊಂಡಿದೆ. ಅಲ್ಲದೆ ಸೋಂಕಿಗೆ ಹೆಚ್ಚು ತುತ್ತಾಗುವ ಸಾಧ್ಯತೆಯಿರುವ ಜನರನ್ನು ಸಹ ಸಮೀಕ್ಷೆಗೊಳಪಡಿಸಲಾಗುತ್ತದೆ.

     ಕೊರೋನಾ ವಾರಿಯರ್ಸ್, ಆರೋಗ್ಯ ಕಾರ್ಯಕರ್ತರು, ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಿರುವವರು, ಕಂಟೈನ್ ಮೆಂಟ್ ವಲಯಗಳಲ್ಲಿ ಇರುವ ವ್ಯಕ್ತಿಗಳು, ಪೊಲೀಸ್ ಸಿಬ್ಬಂದಿಗಳನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap