ರೈತರಿಗೆ ಭರ್ಜರಿ ಗಿಫ್ಟ್ ಕೊಟ್ಟ ಜಗನ್..!!!

ವಿಜಯವಾಡ:
 
   ಆಂಧ್ರಪ್ರದೇಶದಲ್ಲಿ ಬಂದಿರುವ ನೂತನ ಸರ್ಕಾರದಿಂದ ರೈತರಿಗೆ ಬರ್ಜರಿ ಕೊಡುಗೆ ಲಭಿಸಿದೆ ಇನ್ನು ಮುಂದೆ ರಾಜ್ಯದ ರೈತರಿಗೆ ಹಗಲಿನಲ್ಲಿ 9 ಗಂಟೆ ವಿದ್ಯುತ್ ಪೂರೈಸುವ ಸಂಬಂಧ ಒಂದು ವಾರದೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಆದೇಶಿಸಿದ್ದಾರೆ.
   ರೈತರಿಗೆ 9 ಗಂಟೆ ವಿದ್ಯುತ್ ಪೂರೈಕೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ ಎಂದು ಅವರು ಹೇಳಿದ್ದಾರೆ.
    ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಜಗನ್ ಮೋಹನ್ ರೆಡ್ಡಿ, 6,663 ಫೀಡರ್ ಗಳ ಮೂಲಕ ಕೃಷಿ ಹಾಗೂ ದೇಶಿ ವಲಯಗಳಿಗೆ ವಿದ್ಯುತ್ ಪೂರೈಸಲಾಗುತ್ತಿದೆ. ಈ ಪೈಕಿ ಶೇ, 60 ರಷ್ಟು 9 ಗಂಟೆ ವಿದ್ಯುತ್  ಪೂರೈಸುವ ಸಾಮರ್ಥ್ಯವನ್ನು ಪಡೆದಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap