ಅಮರಾವತಿ
ಆಂದ್ರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗುದನ್ನು ತಡೆಯಲು ಟಿಡಿಪಿ ಪಕ್ಷದ ಇಬ್ಬರು ಶಾಸಕರನ್ನು ಜಗನ್ ಮೋಹನ್ ರೆಡ್ಡಿ ಸರ್ಕಾರ ಗೃಹ ಬಂಧನದಲ್ಲಿರಿಸಿದೆ.
ಜಗನ್ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದ್ದು ಆಂಧ್ರಕ್ಕೆ ಮೂರು ರಾಜಧಾನಿ ಮಾಡುವ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ. ಮೂರು ರಾಜಧಾನಿಯಲ್ಲಿ ಅಮರಾವತಿ ನಗರ ಸೇರಿಲ್ಲವಾದ್ದರಿಂದ ಅಮರಾವತಿ ನಿರ್ಮಾಣಕ್ಕೆ ಭೂಮಿ ಕೊಟ್ಟಿದ್ದ ರೈತರು ಇದರ ವಿರುದ್ಧವಾಗಿ ಕೆಲವು ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಟಿಡಿಪಿ ಶಾಸಕರ ಭಾಗವಹಿಸುವಿಕೆಯನ್ನು ತಡೆಯಬೇಕೆಂಬ ಕಾರಣದಿಂದ ವಿಜಯವಾಡದ ಶಾಸಕರಾದ ಕೆಸಿನೇನಿ ಶ್ರೀನಿವಾಸ್, ಶಾಸಕ ಬುದ್ಧ ವೆಂಕನ್ನ ಅವರನ್ನು ಗೃಹ ಬಂಧನದಲ್ಲಿ ಇಡಲಾಗಿದೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/06/130743-jagan-mohan-reddy.gif)