ಲಕ್ನೋ:
ಉತ್ತರ ಪ್ರದೇಶದ ಅಲಿಗಢ್ ಕ್ಷೇತ್ರದಿಂದ ಲೋಕಸಭೆ ಟಿಕೆಟ್ ನೀಡಲು ನನ್ನಿಂದ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಅವರು 5 ಕೋಟಿ ರೂ. ಕೇಳಿದ್ದರು ಎಂದು ಮಾಜಿ ಎಂಎಲ್ಸಿ ಮುಕುಲ್ ಉಪಾಧ್ಯಾಯ ಆರೋಪ ಮಾಡಿದ್ದಾರೆ.
ಈ ಮದ್ಯೆ ಬಿಎಸ್ಪಿ ಇಂದ ಹೊರಬಂದ ನಂತರ ಮುಕುಲ್ ಉಪಾಧ್ಯಾಯ, ಮಾಯಾವತಿ ಅವರು ಲೋಕಸಭೆ ಚುನಾವಣೆ ಟಿಕೆಟ್ ನೀಡಲು ನನ್ನ ಬಳಿ ನಾಲ್ಕು ಬಾರಿ 5 ಕೋಟಿ ರೂ. ಕೇಳಿದ್ದರು. ಇದಕ್ಕೆ ನಿರಾಕರಿಸಿದ್ದಕ್ಕೆ ಅಲಿಗಢ್ ಕ್ಷೇತ್ರದಿಂದ ಸ್ಪರ್ಧಿಸಲು ನನ್ನ ಸಹೋದರ ರಾಮ್ವೀರ್ ಉಪಧ್ಯಯನ ಪತ್ನಿ ಸೀಮಾರಿಗೆ ಟಿಕೆಟ್ ನೀಡಿದ್ದಾರೆ. ಮಾಯಾವತಿ ಮಾಡಿದ ಪಿತೂರಿಯಿಂದ ನನ್ನ ಸಹೋದರನೇ ನನ್ನ ವಿರುದ್ಧ ನಿಂತಿದ್ದಾನೆ ಎಂದು ಮುಕುಲ್ ಉಪಾಧ್ಯಾಯ ಬಿಎಸ್ಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ ಈ ವಿಚಾರವಾಗಿ ಬಿಎಸ್’ಪಿಯಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ