ಕ್ರಿಕೆಟ್ ದೇವರಿಗೆ ನೀಡಿದ್ದ ಭದ್ರತೆ ಹಿಂಪಡೆದ ಮಹಾ ಸರ್ಕಾರ.!

ಮುಂಬೈ

   ಕ್ರಿಕೆಟ್ ದೇವರು ಎಂದೇ ಅಭಿಮಾನಿಗಳಿಂದ ಕರೆಸಿಕೊಳ್ಳವ ಸಚಿನ್ ತೆಂಡೂಲ್ಕರ್ ಅವರಿಗೆ ನೀಡಲಾಗಿದ್ದ ವಿಶೇಷ ಭದ್ರತೆಯನ್ನು ಮಹಾರಾಷ್ಟ್ರ ಸರ್ಕಾರ ಹಿಂಪಡೆದಿದೆ ಮತ್ತು  ಸಿಎಂ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆಗೆ ಭದ್ರತೆ ಹೆಚ್ಚು ಮಾಡಲಾಗಿದೆ.

   ಮಹಾರಾಷ್ಟ್ರ ಸರ್ಕಾರ ಸಚಿನ್  ಅವರಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದು ಸಿಎಂ ಪುತ್ರ ಶಿವಸೇನಾ ಶಾಸಕ ಆದಿತ್ಯ ಠಾಕ್ರೆಗೆ ನೀಡಲಾಗಿದ್ದ ‘ವೈ ಪ್ಲಸ್’ ಭದ್ರತೆಯನ್ನು ಹೆಚ್ಚು ಮಾಡಿ ಜೆಡ್‌ ಭದ್ರತೆ ಒದಗಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಮಹಾರಾಷ್ಟ್ರದಲ್ಲಿ ನಲವತ್ತಕ್ಕೂ ಹೆಚ್ಚು ಮಂದಿ ವಿಐಪಿ ಗಳಿಗೆ ಭದ್ರತೆ ಹಿಂಪಡೆಯಲಾಗಿದೆ. ಕೆಲವರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಇನ್ನು ಕೆಲವರಿಗೆ ಹೊಸದಾಗಿ ಭದ್ರತೆ ನೀಡಲಾಗಿದೆ.ಸಚಿನ್‌ ಗೆ ಒಬ್ಬ ಕಾನ್ಸ್‌ಟೇಬಲ್ ಅನ್ನು ಭದ್ರತೆಗೆ ನೀಡಲಾಗಿತ್ತು. ಅದನ್ನು ಹಿಂಪಡೆಯಲಾಗಿದೆ. ಆದರೆ ಅವರಿಗೆ ಪೊಲೀಸ್ ಎಸ್‌ಕಾರ್ಟ್‌ ವ್ಯವಸ್ಥೆ ಮುಂದುವರೆಯಲಿದೆ ಎಂದು ಗೃಹ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

 

 

Recent Articles

spot_img

Related Stories

Share via
Copy link
Powered by Social Snap