ಬೆತುಲ್
ಗಣಿಗಾರಿಕೆ ಮತ್ತಿತರ ವಲಯಗಳನ್ನು ಖಾಸಗೀಕರಣಗೊಳಿಸುವತ್ತ ನರೇಂದ್ರ ಮೋದಿ ಸರ್ಕಾರ ನಿರತವಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ನಾಥ್ ಆರೋಪಿಸಿದ್ದಾರೆ.
ಅಂದಿನ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರು ಕಲ್ಲಿದ್ದಲು ಗಣಿಗಾರಿಕೆಯನ್ನು ರಾಷ್ಟ್ರೀಕರಣ ಮಾಡಿದರು. ಆದರೆ ಈಗಿನ ಪ್ರಧಾನಿ ಘೋಷಿಸಿರುವ ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ ಮತ್ತು ಇತರ ಯೋಜನೆಗಳು ಫಲಪ್ರದ ವಾಗಿದೆಯೇ ? ಮೋದಿ ಅವರ ಅಚ್ಚೇದಿನ್ ಕೇವಲ ಬಿಜೆಪಿ ನಾಯಕರಿಗೆ ಮಾತ್ರ ಬಂದಿರಬಹುದು. ಅವರು ಐಷಾರಾಮಿ ವಾಹನಗಳಲ್ಲಿ ಸಂಚರಿಸುತ್ತಿದ್ದಾರೆ ಎಂದು ಅವರು ಪಥಕೆರೆ ಎಂಬಲ್ಲಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಹೇಳಿದರು.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು, ಹಿಂದಿನ ಸರ್ಕಾರ ಸ್ಥಾಪಿಸಿದ ಕೈಗಾರಿಕೆಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದಲ್ಲಿ ಕೈಗಾರಿಕೆಗಳು ಮುಚ್ಚಿವೆ ಎಂದು ಆರೋಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/01/mp_cm_kamalnath_photo_ht_15.gif)