ಮೋದಿಯನ್ನು ಉಗ್ರಗಾಮಿ ಎಂದ ತೆಲಂಗಾಣ ಕಾಂಗ್ರೆಸ್ ನಾಯಕಿ…!!!!

ಹೈದರಾಬಾದ್:
        ಪ್ರಧಾನಿ ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಬೆದರಿಸುತ್ತಾರೆ. ಅವರ ಆಡಳಿತಾವಧಿಯಲ್ಲಿ ಜನರು ಹೆದರಿಕೆಯಲ್ಲಿ ಬದುಕುತ್ತಿದ್ದಾರೆ.ಅವರನ್ನು ನೋಡಿದರೆ ತೇಟ್  ಉಗ್ರಗಾಮಿಯಂತೆ ಕಾಣಿಸುತ್ತಾರೆ ಎಂದು ವಿಜಯ್ ಶಾಂತಿ ಟೀಕಿಸಿದ್ದಾರೆ.
        ಶಂಶಾಬಾದ್​ನಲ್ಲಿ ನಿನ್ನೆ ಸಂಜೆ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಕಾಂಗ್ರೆಸ್​ ರಾಷ್ಟ್ರಾಧ್ಯಕ್ಷ ರಾಹುಲ್​ ಗಾಂಧಿಯವರಿಗಿಂತ ಮುಂಚೆ ಮಾತನಾಡಿದ ವಿಜಯಶಾಂತಿ ಈ ರೀತಿಯ ವಿವಾದಕ್ಕೀಡಾಗುವ ಹೇಳಿಕೆಯನ್ನು ನೀಡಿ ಸುದ್ದಿಯಾಗಿದ್ದಾರೆ.
        ಮೋದಿ ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ, ಜನ ಹೆದರಿಕೆಯಲ್ಲಿ ಬದುಕುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಯಾವಾಗ ಬಾಂಬ್​ ಸ್ಫೋಟ ಮಾಡುತ್ತಾರೆ ಎಂಬ ಭಯದಲ್ಲಿ ಎಲ್ಲರೂ ಇರುವಂತಾಗಿದೆ. ಮೋದಿ ನೋಡಲು ಉಗ್ರಗಾಮಿಯಂತೆ ಕಾಣಿಸುತ್ತಾರೆ. ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ. ದೇಶದ ಪ್ರಧಾನಿ ಈ ರೀತಿ ಇರುವುದು ಸರಿಯಲ್ಲ ಎಂದು ಹೇಳುವ ಮೂಲಕ ವಿಜಯ ಶಾಂತಿ ಹೊಸ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link