ಹೈದರಾಬಾದ್:

ಪ್ರಧಾನಿ ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಬೆದರಿಸುತ್ತಾರೆ. ಅವರ ಆಡಳಿತಾವಧಿಯಲ್ಲಿ ಜನರು ಹೆದರಿಕೆಯಲ್ಲಿ ಬದುಕುತ್ತಿದ್ದಾರೆ.ಅವರನ್ನು ನೋಡಿದರೆ ತೇಟ್ ಉಗ್ರಗಾಮಿಯಂತೆ ಕಾಣಿಸುತ್ತಾರೆ ಎಂದು ವಿಜಯ್ ಶಾಂತಿ ಟೀಕಿಸಿದ್ದಾರೆ.
ಶಂಶಾಬಾದ್ನಲ್ಲಿ ನಿನ್ನೆ ಸಂಜೆ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಯವರಿಗಿಂತ ಮುಂಚೆ ಮಾತನಾಡಿದ ವಿಜಯಶಾಂತಿ ಈ ರೀತಿಯ ವಿವಾದಕ್ಕೀಡಾಗುವ ಹೇಳಿಕೆಯನ್ನು ನೀಡಿ ಸುದ್ದಿಯಾಗಿದ್ದಾರೆ.
ಮೋದಿ ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ, ಜನ ಹೆದರಿಕೆಯಲ್ಲಿ ಬದುಕುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಯಾವಾಗ ಬಾಂಬ್ ಸ್ಫೋಟ ಮಾಡುತ್ತಾರೆ ಎಂಬ ಭಯದಲ್ಲಿ ಎಲ್ಲರೂ ಇರುವಂತಾಗಿದೆ. ಮೋದಿ ನೋಡಲು ಉಗ್ರಗಾಮಿಯಂತೆ ಕಾಣಿಸುತ್ತಾರೆ. ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ. ದೇಶದ ಪ್ರಧಾನಿ ಈ ರೀತಿ ಇರುವುದು ಸರಿಯಲ್ಲ ಎಂದು ಹೇಳುವ ಮೂಲಕ ವಿಜಯ ಶಾಂತಿ ಹೊಸ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
