ಬಾಘ್ಘತ್: ![](http://prajapragathi.com/wp-content/uploads/2018/10/uirc-similarities-between-hinduism-and-islam.gif)
![](http://prajapragathi.com/wp-content/uploads/2018/10/uirc-similarities-between-hinduism-and-islam.gif)
ಕೆಲವು ದಿನಗಳ ಹಿಂದೆ ತಮ್ಮ ಮಗ ಕೊಲೆಯಾಗಿದ್ದ ಪ್ರಕರಣವನ್ನು ಸ್ವಾಭಾವಿಕ ಸಾವು ಎಂದು ದಾಖಲಿಸಿದೆ ಪೊಲೀಸರ ವರ್ತನೆಯಿಂದ ಮನನೊಂದ ಕುಟುಂಬದ ಸದಸ್ಯರು ಮುಸ್ಲಿಂ ಧರ್ಮದಿಂದ ಹಿಂದೂ ಧರ್ಮಕ್ಕೆ ಘರ್ ವಾಪಸಿ(ಮತಾಂತರ) ಮಾಡಿಕೊಂಡಿದ್ದಾರೆ.
ಭದ್ರಕಾ ಗ್ರಾಮದ ನಿವಾಸಿ ಅಖ್ತರ್ ಸೋಮವಾರ ತನ್ನ ಕುಟುಂಬದ 12 ಮಂದಿ ಸದಸ್ಯರೊಂದಿಗೆ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಈ ಸಂಬಂಧ ಪ್ರಮಾಣ ಪತ್ರವನ್ನು ಉಪ ವಿಭಾಗಾಧಿಕಾರಿ ಅವರಿಗೆ ಸಲ್ಲಿಸಿದ್ದಾರೆ, ಜೊತೆಗೆ ತಾವು ಸ್ವ ಇಚ್ಚೆಯಿಂದ ಧರ್ಮ ಬದಲಿಸಿರುವುದಾಗಿ ತಿಳಿಸಿದ್ದಾರೆ.
ಪ್ರಕರಣದ ಹಿನ್ನೆಲೆ
ಕೆಲವು ತಿಂಗಳುಗಳ ಹಿಂದೆ ಅಖ್ತರ್ ಪುತ್ರ ಸಾವನ್ನಪ್ಪಿದ್ದರು , ಆದರೆ ಪೊಲೀಸರು ಸರಿಯಾಗಿ ತನಿಖೆ ನಡೆಸದೆ, ಅಕ್ತರ್ ಅವರ ಪುತ್ರನ ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲಾಗಿತ್ತು, ಈ ಸಂಬಂಧ ತಮಗೆ ಸಹಾಯ ಮಾಡುವಂತೆ ತಮ್ಮ ಧರ್ಮದವರನ್ನು ಕೇಳಿದ್ದಾರೆ ಆದರೆ ಯಾರೋಬ್ಬರು ಅವರ ಸಹಾಯಕ್ಕೆ ಬಂದಿಲ್ಲ ಹೀಗಾಗಿ ಅಕ್ತರ್ ತಮ್ಮ ಕುಟುಂಬಸ್ಥರ ಜೋತೆ ತಮ್ಮ ಧರ್ಮವನ್ನು ಬದಲಿಸಿದ್ದಾರೆ ಎಂದು ತಿಳಿದು ಬಂದಿದೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/uirc-similarities-between-hinduism-and-islam.gif)