ನವದೆಹಲಿ:
ದೇಶದಲ್ಲಿ ನಡೆಯುತ್ತಿರುವ ಅತಿ ಗಹನ ವಿಷಯಗಳಲ್ಲಿ ಒಂದಾಗಿರುವ ಯೋಧ್ಯೆ ರಾಮ ಮಂದಿರ ಭೂ ವಿವಾದಕ್ಕೆ ಹೊಸ ಟ್ವಿಸ್ಟ್ ಒಂದು ಸಿಕ್ಕಿದೆ ಇತ್ತ ಸುಪ್ರೀಂ ಕೋರ್ಟ್ ನಲ್ಲಿ ಅಯೋಧ್ಯೆ ಪ್ರಕರಣದ ಅಂತಿಮ ವಿಚಾರಣೆ ನಡೆಯುತ್ತಿರುವಂತೆ ಅತ್ತ ಫಿರ್ಯಾದು ದಾರರಲ್ಲಿ ಒಬ್ಬರಾದ ಸುನ್ನಿ ವಕ್ಫ್ ಬೋರ್ಡ್ ತಾನು ಸಲ್ಲಿಸಿದ್ದ ಪ್ರಕರಣದ ಟರ್ಜಿಯನ್ನು ಹಿಂಪಡೆಯಲು ನಿರ್ಧರಿಸಿದೆ ಎನ್ನಲಾಗಿದೆ.
ಮಧ್ಯಸ್ಥಿಕೆ ಸಮಿತಿಯ ಸದಸ್ಯರಾದ ಶ್ರೀರಾಮ್ ಪಂಚು ಅವರಿಗೆ ಪ್ರಕರಣವನ್ನು ಹಿಂಪಡೆಯಲು ಅಫಿಡವಿಟ್ ಕಳುಹಿಸಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈ ಕುರಿತಂತೆ ಇಂದು ಅಂತಿಮ ವಿಚಾರಣೆ ಆರಂಭವಾಗಿದ್ದು, ಸುನ್ನಿ ವಕ್ಫ್ ಮಂಡಳಿಯ ಮೇಲ್ಮನವಿ ಹಿಂಪಡೆಯುವ ಬಗ್ಗೆ ನ್ಯಾಯಾಲಯದಲ್ಲಿ ಚರ್ಚೆ ಬಂದಿಲ್ಲ ಎಂದು ತಿಳಿದು ಬಂದಿದೆ.
ಇಂದು ಸಂಜೆ ಐದು ಗಂಟೆಯೊಳಗೆ ಪ್ರಕರಣದ ವಿಚಾರಣೆ ಮುಕ್ತಾಯವಾಗಲಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಸ್ಪಷ್ಟಪಡಿಸಿದ್ದು , ನಿರ್ಧರಿಸಿದ ಪಕ್ಷಗಳನ್ನು ಹೊರತುಪಡಿಸಿ ಬೇರೆಯವರ ಹಸ್ತಕ್ಷೇಪಕ್ಕೆ ಅವಕಾಶ ನೀಡಲು ಮುಖ್ಯ ನ್ಯಾಯಮೂರ್ತಿ ನಿರಾಕರಿಸಿದ್ದಾರೆ ಎನ್ನಲಾಗಿದೆ.
ನಿನ್ನೆ ವಕೀಲರು ತಮ್ಮ ವಾದ ಮಂಡಿಸಲು ಹೆಚ್ಚುವರಿ ಸಮಯಾವಕಾಶವನ್ನು ಕೇಳಿದ್ದರು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಅಯೋಧ್ಯೆ ಪ್ರಕರಣದ ವಿಚಾರಣೆಯನ್ನು ಇಂದು ಸಂಜೆ 5 ಗಂಟೆಗೆ ಕೊನೆಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಹೀಗಾಗಿ ವಕೀಲರು ಮನವಿ ಮಾಡಿದ ಮನವಿಯನ್ನು ಸಿಜೆಐ ವಜಾಗೊಳಿಸಿದರು. ಆದರೆ ಸುನ್ನಿ ವಕ್ಫ್ ಮಂಡಳಿ ಮನವಿಯನ್ನು ಹಿಂಪಡೆಯುವ ಬಗ್ಗೆ ನ್ಯಾಯಾಲಯದಲ್ಲಿ ಯಾವುದೇ ಚರ್ಚೆ ನಡೆಸಿಲ್ಲಾ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/11/2_06_51_39_Ayodhya-Case_1_H.gif)