ಹೈದರಾಬಾದ್
ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿಯನ್ನು ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ನಿಷೇಧ ಹೇರಬೇಕು ಎಂದು ಆಂಧ್ರಪ್ರದೇಶ ಬಿಜೆಪಿ ಅಧ್ಯಕ್ಷ ಕನ್ನಾ ಲಕ್ಷ್ಮೀ ನಾರಾಯಣ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಓವೈಸಿ ಅವರು ಇಡೀ ದೇಶದಲ್ಲಿ ಸಿಎಎ ವಿರೋಧಿ ಸಮಾವೇಶಗಳಲ್ಲಿ ಪಾಲ್ಗೊಂಡು ಸಿಎಎ ಬಗ್ಗೆ ತಪ್ಪು ಕಲ್ಪನೆಯನ್ನು ಜನರಲ್ಲಿ ಹರಡುತ್ತಿದ್ದಾರೆ. ಸಂಸತ್ನಲ್ಲಿ ಅಂಗೀಕಾರವಾದ ಮಸೂದೆಯ ಬಗ್ಗೆ ಈ ರೀತಿ ಓವೈಸಿ ಮಾಡುತ್ತಿರುವುದು ಸಂವಿಧಾನಕ್ಕೆ ಮಾಡುವ ಅಪಚಾರವಾಗಿದೆ. ಕೇಂದ್ರ ಸರ್ಕಾರ ಓವೈಸಿ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೇ ಅವರು ಇನ್ನೂ ಸಾಕಷ್ಟು ಅನಾಹುತಗಳನ್ನು ಸೃಷ್ಠಿಸುತ್ತಾರೆ ಎಂದು ಕನ್ನಾ ಲಕ್ಷ್ಮೀ ನಾರಾಯಣ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
