ಅನುರಾಗ್ ಠಾಕೂರ್ ಗೆ ತಿರುಗೇಟು ನೀಡಿದ ಓವೈಸಿ..!

ಮುಂಬೈ

    ಆಲ್ ಇಂಡಿಯಾ ಮಜ್ಲೀಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ‘ಎಲ್ಲಿ ಶೂಟ್ ಮಾಡುತ್ತೀರ ಎಂದು ಹೇಳಿ, ಅಲ್ಲಿಗೆ ಬರುತ್ತೇನೆ’ ಎಂದು ಕೇಂದ್ರ ಸಚಿವರ ಹೇಳಿಕೆಗೆ ಟಾಂಗ್ ನೀಡಿದ್ದಾರೆ.

    ಕೇಂದ್ರ ಸಚಿವರೊಬ್ಬರು ದೆಹಲಿಯಲ್ಲಿ ನೀಡಿದ್ದ “ದೇಶದ್ರೋಹಿಗಳನ್ನು ಶೂಟ್ ಮಾಡಬೇಕು” ಎಂಬ ಹೇಳಿಕೆಗೆ ತಿರುಗೇಟು ನೀಡಿದ್ದಾರೆ, ಓವೈಸಿ ನಾನು ತಯಾರಿದ್ದೇನೆ, ಎಲ್ಲಿ ಶೂಟ್ ಮಾಡುತ್ತೀರ ಎಂದು ಹೇಳಿ, ಅಲ್ಲಿಗೆ ಬರುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.

    ಪೌರತ್ವ ತಿದ್ದುಪಡಿ ಕಾಯ್ದೆ ಪರ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಅನುರಾಗ್ ಠಾಕೂರ್ ಅವರು ದೇಶದ್ರೋಹಿ ಗಳನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಹೇಳಿದ್ದರು. ನಿಮ್ಮ ಹೇಳಿಕೆಯಿಂದ ನಮಗೇನು ಭಯವಿಲ್ಲ, ನಮ್ಮ ತಾಯಿ, ಅಕ್ಕ ತಂಗಿಯರು ಪ್ರತಿಭಟನೆಗೆಂದು ಬೀದಿಗಿಳಿದಿದ್ದಾರೆ, ತಮ್ಮ ದೇಶವನ್ನು ಕಾಪಾಡಿಕೊಳ್ಳಬೇಕು ಎಂದು ದೃಢ ನಿರ್ಧಾರ ಮಾಡಿದ್ದಾರೆ.ಭಾರತೀಯ ಚುನಾವಣಾ ಆಯೋಗವು ಅನುರಾಗ್ ಠಾಕೂರ್ ಅವರ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಜನವರಿ 30ರೊಳಗೆ ಉತ್ತರ ನೀಡಬೇಕು ಎಂದು ತಿಳಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap