ಕೇಂದ್ರ ಕೃಷಿ ಮಸೂದೆ ವಿರುದ್ಧ ನಿರ್ಣಯ ಮಂಡಿಸಿದ ಪಂಜಾಬ್..!

ಚಂಡೀಗಢ:

   ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಜಾರಿಗೆ ತಂದಿರುವ ವಿವಾದಿತ ಕೃಷಿ ಮಸೂದೆ ವಿರುದ್ಧ ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ. ನೂತನ ಕೃಷಿ ಮಸೂದೆಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿಶೇಷ ಅಧಿವೇಶನದ ಎರಡನೇ ದಿನವಾದ ಇಂದು ಸದನದ ನಾಯಕ ನಿರ್ಣಯ ಮಂಡನೆ ಮಾಡಿದರು. 

   ಕೇಂದ್ರದ ಕೃಷಿ ಕಾನೂನುಗಳನ್ನು ಎದುರಿಸಲು ಮೂರು ಮಸೂದೆಗಳನ್ನು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಪರಿಚಯಿಸಿದರು. ಅಮರೀಂದರ್ ಸಿಂಗ್ ಅವರು ಪರಿಚಯಿಸಿದ ಮೂರು ಮಸೂದೆಗಳು ಇಂತಿವೆ…ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020, ಅಗತ್ಯ ಸರಕುಗಳು (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020, ಮತ್ತು ಬೆಲೆ ಭರವಸೆ ಕುರಿತು ರೈತರ ಒಪ್ಪಂದ ಮತ್ತು ಕೃಷಿ ಸೇವೆಗಳು (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap