ವಿಭಜನೆ ವಿರುದ್ಧ ಏಕತೆಯ ಆಯ್ಕೆ ಜನತೆಯದ್ದಾಗಬೇಕು : ಪಿ ಚಿದಂಬರಂ

ನವದೆಹಲಿ:

     ಅಮೇರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ಅವರ “ಭೀತಿಯ ವಿರುದ್ಧ ಭರವಸೆ, ವಿಭಜನೆಯ ವಿರುದ್ಧ ಏಕತೆ್ಯ ಆಯ್ಕೆ” ಹೇಳಿಕೆಯನ್ನು ಉಲ್ಲೇಖಿಸಿ ಅದನ್ನು ಬಿಹಾರಕ್ಕೆ ಯಾವ ರೀತಿ ಅನ್ವಯವಾಗುತ್ತದೆ ಎಂಬ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಹಿರಿಯ ಮುಖಂಡ ಹಾಗು ಮಾಜಿ ಸಚಿವ ಪಿ.ಚಿದಂಬರಂ ಭಾರತದಲ್ಲಿಯೂ ಬಿಹಾರ, ಮಧ್ಯಪ್ರದೇಶ ಮತ್ತು ಇತರೆಡೆಗಳಲ್ಲಿ ಮತ ಚಲಾಯಿಸುವ ಜನತೆ  ಇದೇ ರೀತಿಯ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

     ಅಕ್ಟೋಬರ್ 28 ರಿಂದ ಮೂರು ಹಂತಗಳಲ್ಲಿ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇದಲ್ಲದೆ ಒಂದು ಲೋಕಸಭೆ  ಉಪಚುನಾವಣೆ ಮತ್ತು 12 ರಾಜ್ಯಗಳಲ್ಲಿ56 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ.”ಯುಎಸ್ ಚುನಾವಣೆಗಳಲ್ಲಿ ಡೆಮಾಕ್ರಟಿಕ್ ಅಭ್ಯರ್ಥಿಜೋ ಬಿಡೆನ್ ನಿನ್ನೆ” ನಾವು ಭೀತಿಯ ವಿರುದ್ಧ ಭರವಸೆ, ವಿಭಜನೆಯ ವಿರುದ್ಧ ಏಕತೆಯ, ಕಲ್ಪನೆಯ ವಿರುದ್ಧ ವಿಜ್ಞಾನ, ಸುಳ್ಳಿನ ವಿರುದ್ಧ ಸತ್ಯದ ಆಯ್ಕೆ ಮಾಡಬೇಕು” ಎಂದಿದ್ದಾರೆ.ಅದರಂತೆ ನಮ್ಮಲ್ಲಿಯೂ ಬಿಹಾರ, ಮಧ್ಯಪ್ರದೇಶ ಹಾಗೂ ಇತರೆಡೆಗಳಲ್ಲಿ ಈ ತಿಂಗಳು ನಡೆಯುವ ಚುನಾವಣೆ ವೇಳೆ ಮತದಾರರು  ತೆಗೆದುಕೊಳ್ಳಬೇಕಾದ ಒಳ್ಳೆಯ ಪ್ರತಿಜ್ಞೆ ಇದಾಗಿದೆ” ಚಿದಂಬರಂ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

ನ್ಯೂಜಿಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಜಸಿಂದಾ ಅರ್ಡೆರ್ನ್ ಅವರ ಗೆಲುವು ಸಭ್ಯತೆ ಮತ್ತು ಪ್ರಗತಿಪರ ಮೌಲ್ಯಗಳು ಪ್ರಜಾಪ್ರಭುತ್ವದಲ್ಲಿ ಚುನಾವಣೆಯಲ್ಲಿ ಗೆಲ್ಲಬಹುದು ಎಂಬ ಭರವಸೆಯನ್ನು ನಮಗೆ ನೀಡುತ್ತದೆ. ಎಂದು ಕೇಂದ್ರದ ಮಾಜಿ ಸಚಿವರು ಹೇಳಿದರು. ನ್ಯೂಜಿಲ್ಯಾಂಡ್ ಮಹಾ ಚುನಾವಣೆಯಲ್ಲಿ  ಭರ್ಜರಿ ಜಯ ಸಾಧಿಸಿ ಅರ್ಡೆರ್ನ್ ಎರಡನೇ ಬಾರಿಗೆ ಪ್ರಧಾನಿ ಪಟ್ಟವೇರುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap