ನವದೆಹಲಿ:
ಕೊರೋನಾ ಸೋಂಕಿತರಿಗೆ ನೀಡಲಾಗುತ್ತಿರುವ ಪ್ಲಾಸ್ಮಾ ಥೆರಪಿಯನ್ನು ಮುಂದುವರೆಸಲಾಗುತ್ತದೆ ಹಾಗೂ ಐಐಟಿ ತರಬೇತಿಗೆಂದು ತೆರಳಿ ರಾಜಸ್ತಾನದ ಕೋಟಾದಲ್ಲಿಸಿಲುಕಿರುವ ವಿದ್ಯಾರ್ಥಿಗಳನ್ನು ಶೀಘ್ರದಲ್ಲಿಯೇ ನಗರಕ್ಕೆ ಕರೆತರಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ದೆಹಲಿಯಲ್ಲಿ ಪ್ಲಾಸ್ಮಾ ಥೆರಪಿ ಪ್ರಯೋಗ ನಿಲ್ಲುವುದಿಲ್ಲ. ಪ್ಲಾಸ್ಮಾ ಥೆರಪಿಯ ಆರಂಭಿಕ ಫಲಿತಾಂಶ ಉತ್ತಮವಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಸೋಂಕಿತ ವ್ಯಕ್ತಿಯೊಬ್ಬರಿಗೆ ಪ್ಲಾಸ್ಮಾ ಥೆರಪಿ ನಡೆಸಲಾಗಿದ್ದು, ಇದೀಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ದೆಹಲಿಯಲ್ಲಿ ಈ ವರೆಗೂ 1,100 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇತರೆ ಸೋಂಕಿತರ ಜೀವ ಉಳಿಸಲು ಪ್ಲಾಸ್ಮಾ ದಾನ ಮಾಡಿದ್ದಾರೆಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
