ಕೋಲ್ಕತ್ತಾ: 
ಪ್ರಧಾನಿಯವರು ಭಾನುವಾರದ ದಿನ ರಾತ್ರಿ ಮೇಣದ ಬತ್ತಿಗಳನ್ನು ಹತ್ತಿಸುವ ಮೂಲಕ ಕೊರೋನಾ ವಿರುದ್ಧ ದೇಶದ ಒಗ್ಗಟ್ಟನ್ನು ಪ್ರದರ್ಶಿಸಿ ಎಂದು ಕರೆ ಕೊಟ್ಟ ಬೆನ್ನಲ್ಲೇ . ಇದರ ಕುರಿತು ಪ್ರತಿಕ್ರಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ “ನಾನಿದನ್ನು ರಾಜಕೀಯಗೊಳಿಸುವುದಿಲ್ಲ, ನನ್ನ ವೈಯುಕ್ತಿಕ ಇಚ್ಚೆಯಂತಿರುತ್ತೇನೆ. ಇಷ್ಟವಾದರೆ ಆ ಸಮಯದಲ್ಲಿ ನಿದ್ರಿಸುತ್ತೇನೆ” ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿಯವರ ಸಂದೇಶವನ್ನು ಪಾಲಿಸುವವರು ಅವರ ಸೂಚನೆಗಳನ್ನು ಅನುಸರಿಸಬಹುದು , “ಪ್ರಧಾನಿ ತಮ್ಮ ಮನಸ್ಸಿನಲ್ಲಿರುವುದನ್ನು ಹೇಳೀದ್ದಾರೆ. ನಾನು ನನ್ನ ಮಾತನ್ನು ಹೇಳುತ್ತೇನೆ. ನಾನು ಬೇರೊಬ್ಬರ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ…. ಪ್ರಧಾನಿ ಏನಾದರೂ ಒಳ್ಳೆಯದನ್ನು ಹೇಳಿದ್ದಾರೆ ಎಂದು ನೀವು ಭಾವಿಸಿದರೆ, ಅದನ್ನು ಅನುಸರಿಸಿ… ಇದು ವೈಯಕ್ತಿಕ ನಿರ್ಧಾರ, ”ಮಮತಾ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








