ನವದೆಹಲಿ : 
ದೇಶದೆಲ್ಲೆಡೆ ಲೋಕಸಭೆ ಚುನಾವಣೆ ಕಾವೇರುತ್ತಿರುವ ಬೆನ್ನಲೇ ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆಯಾದರೆ ಹಾಗೂ ಜೆಡಿಎಸ್ ಜತೆಗಿನ ಮೈತ್ರಿಗೆ ಧಕ್ಕೆಯಾದರೆ ದೇಶಾದ್ಯಂತ ಕಾಂಗ್ರೆಸ್ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂಬ ಉದ್ದೇಶದಿಂದ ಸಿದ್ದುಗೆ ರಾಹುಲ್ ಖಡಕ್ ವಾರ್ನಿಂಗ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆಯಾಗುವಂತಹ ನಡವಳಿಕೆ ತೋರದಂತೆ ಕಾಂಗ್ರೆಸ್ ಶಾಸಕರನ್ನು ನಿಯಂತ್ರಿಸಿ’ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಂಗ್ರೆಸ್ನ ರಾಜ್ಯ ನಾಯಕತ್ವಕ್ಕೆ ತಾಕೀತು ಮಾಡಿದ್ದಾರೆ.
ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಹೊಂದಾಣಿಕೆ ಕೊರತೆ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ದೆಹಲಿಗೆ ಕರೆಸಿಕೊಂಡ ರಾಹುಲ್ ಗಾಂಧಿ ಅವರು ಈ ತಾಕೀತು ನೀಡಿದರು ಎಂದು ಮೂಲಗಳು ತಿಳಿಸಿವೆ.
‘ವೈಯಕ್ತಿಕ ಒತ್ತಡಗಳು ಏನೇ ಇದ್ದರೂ ಮೈತ್ರಿಗೆ ಧಕ್ಕೆಯಾಗುವಂತಹ ಹೇಳಿಕೆಗಳನ್ನು ಯಾರೂ ನೀಡಬಾರದು. ಈ ವಿಷಯವನ್ನು ಕಾಂಗ್ರೆಸ್ ಶಾಸಕರಿಗೆ ಸ್ಪಷ್ಟಪಡಿಸಿ. ಇದಾದ ನಂತರವೂ ಯಾರಾದರೂ ಮೈತ್ರಿ ಸರ್ಕಾರದ ವಿರುದ್ಧ ಹೇಳಿಕೆ ನೀಡಿದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








