ನವದೆಹಲಿ:
ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿಯ ಕೊನೆಯ ವಿಧಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾಜಿ ಸಚಿವ ಮತ್ತುಅಕ್ರಮ ಗಣಿಗಾರಿಕೆ ಆರೋಪ ಹೊತ್ತ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಎರಡು ದಿನಗಳ ಕಾಲ ಬಳ್ಳಾರಿಗೆ ಭೇಟಿ ಕೊಡಲು ಸುಪ್ರೀಂ ಕೋರ್ಟ್ ಅನುಮತಿಸಿದೆ. ಈ ಹಿನ್ನೆಲೆ ಶುಕ್ರವಾರ ಮಧ್ಯಾಹ್ನ ರೆಡ್ಡಿ ಬಳ್ಳಾರಿಗೆ ಆಗಮಿಸಲಿದ್ದಾರೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಬಿ.ಆರ್. ಗವಾಯಿ ಮತ್ತು ಕೃಷ್ಣ ಮುರಾರಿ ಅವರ ಪೀಠ ಎರಡು ದಿನಗಳ ಕಾಲ ಪೊಲೀಸ್ ರಕ್ಷಣೆಯಲ್ಲಿ ಬಳ್ಳಾರಿಗೆ ಭೇಟಿ ನೀಡಲು ಜನಾರ್ಧನ ರೆಡ್ಡಿ ಅವರಿಗೆ ಅನುಮತಿಸಿದೆ. ಆದರೆ ಹಾಗೆ ಭೇಟಿ ನೀಡಿದ ಸಮಯದಲ್ಲಿ ಅವರು ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಬಾರದು ಎಂದು ಹೇಳಿದೆ.
“ಅರ್ಜಿದಾರರ ನಿಕಟವರ್ತಿಯ ತಾಯಿಯ ಸಾವಿನ ಕಡೆಯ ವಿಧಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ, ಅವರು ಎರಡು ದಿನಗಳ ಕಾಲ ಬಳ್ಳಾರಿಗೆ ಭೇಟಿ ನೀಡಬೇಕಾಗಿದೆ ಎಂದು ಕೋರಿದ್ದಾರೆ. ಈ ಹಿನ್ನೆಲೆ ಅವರಿಗೆ ಎರಡು ದಿನಗಳ ಕಾಲ ಭೇಟಿ ನೀಡಲು ಅನುಮತಿ ನೀಡಲಾಗಿದೆ. ಅದೂ ಸಹ ಪೊಲೀಸರ ಭದ್ರತೆಯ ಅಡಿಯಲ್ಲಿಬರಲಿದೆ. ಅವರು ಬಳ್ಳಾರಿಗೆ ಭೇಟಿ ನೀಡಿದಾಗ ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಬಾರದು ” ಎಂಬ ಷರತ್ತಿನ ಮೇಲೆ ಅನುಮತಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
