ಕೆಸಿಆರ್ ವಿರುದ್ಧ ಸುಳ್ಳು ಸುದ್ದಿ ಪ್ರಕಟಿಸಿದ ಪತ್ರಕರ್ತನ ಬಂಧನ..!

ಹೈದರಾಬಾದ್ :

      ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಕೊರೋನೋ  ಸೋಂಕು ತಗುಲಿದೆ ಎಂಬ ಸುಳ್ಳು ಸುದ್ದಿ ಬರೆದಿದ್ದ ಹಿನ್ನೆಲೆಯಲ್ಲಿ  ಜುಬಿಲಿ ಹಿಲ್ಸ್ ಪೊಲೀಸರು ಸ್ಥಳೀಯ ದಿನಪತ್ರಿಕೆ ‘ಆದಾಬ್ ಹೈದರಾಬಾದ್’ ನಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ಅನಮ್ಚಿನ್ನಿ ವೆಂಕಟೇಶ್ವರ ರಾವ್ ಅವರನ್ನು ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಸೋಮವಾರ ಬೆಳಗ್ಗೆ ವಾಕಿಂಗ್ ಗೆ ತೆರಳಿದ್ದ ಪತ್ರಕರ್ತನನ್ನು ಖಮ್ಮಾನ್ ನಿಂದ ವಶಕ್ಕೆ ಪಡೆದುಕೊಳ್ಳಲಾಗಿದ್ದು ವಿಚಾರಣೆಗಾಗಿ ಹೈದಾರಾಬಾದ್ ಗೆ ಕರೆದೊಯ್ಯಲಾಗಿದೆ, ಜ್ಯುಬಿಲಿ ಹಿಲ್ಸ್ ನ ರಹಮತ್ ನಗರ ನಿವಾಸಿ ಇಲಿಯಾಸ್ ಎಂಬುವರು ನೀಡಿದ್ದ ದೂರಿನ ಮೇರೆಗೆ ಪತ್ರಕರ್ತನನ್ನು ಬಂಧಿಸಲಾಗಿದೆ, ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಅವರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವರದಿ ಮಾಡಿದ್ದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap