ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಿಧನ…!

ಚೆನ್ನೈ:

     ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಮತ್ತು ಭಾರತದ ಕಾನೂನು ಆಯೋಗದ ಮಾಜಿ ಅಧ್ಯಕ್ಷರಾದ ನ್ಯಾಯಮೂರ್ತಿ ಎ.ಆರ್. ಲಕ್ಷ್ಮಣನ್ ಅವರಿಗೆ ತೀವ್ರ ಹೃದಯಘಾತವಾಗಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ಲಕ್ಷ್ಮಣನ್ ಅವರಿಗೆ ಬುಧವಾರ ಬೆಳಗ್ಗೆ 11 ಗಂಟೆಗೆ ಹೃದಯಾಘಾತವಾಗಿದ್ದು, ಕೂಡಲೇ ಕಾರೈಕುಡಿ ಆಸ್ಪತ್ರೆಗೆ ದಾಖಲಿಸಲಾಯಿತಾದ್ರು ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದಾರೆ. ವಿಪರ್ಯಾಸ ಅಂದ್ರೆ ತಮ್ಮ ಪತ್ನಿ ನಿಧನರಾದ 2 ದಿನಗಳ ನಂತರ ಲಕ್ಷ್ಮಣನ್‌ ಅವರು ಕೂಡ ಸಾವನ್ನಪ್ಪಿದ್ದಾರೆ. ಇನ್ನು 78 ವರ್ಷದ ಈ ನಿವೃತ್ತ ನ್ಯಾಯಮೂರ್ತಿ ಇಬ್ಬರು ಪುತ್ರಿಯರು ಮತ್ತು ಇಬ್ಬರು ಪುತ್ರರನ್ನ ಅಗಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap