ನವದೆಹಲಿ
ಲಾಕ್ ಡೌನ್ ನಿಂದಾಗಿ ತೀವ್ರ ಸಂಕಷ್ಟಕ್ಕೊಳಗಾಗಿರುವ ವಲಸೆ ಕಾರ್ಮಿಕರನ್ನು 15 ದಿನಗಳೊಳಗಾಗಿ ಅವರವರ ತವರು ರಾಜ್ಯಗಳಿಗೆ ಕಳುಹಿಸಿ ಎಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಮಂಗಳವಾರ ಸೂಚನೆ ನೀಡಿದೆ.
ವಲಸೆ ಕಾರ್ಮಿಕರ ಸಂಕಷ್ಟ ಕುರಿತಂತೆ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಅಶೋಕ್ ಭೂಷಣ್, ಸಂಜಯ್ ಕಿಶಾನ್ ಕೌಲ್ ಹಾಗೂ ಎಂಆರ್. ಶಾರನ್ನೊಳಗೊಂಡ ಸುಪ್ರೀಂಕೋರ್ಟ್’ನ ತ್ರಿಸದಸ್ಯತ್ವ ಪೀಠ, 15 ದಿನಗಳೊಳಗಾಗಿ ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರನ್ನು ಅವರ ತವರು ರಾಜ್ಯಗಳಿಗೆ ಕಳುಹಿಸಿಕೊಡುವಂತೆ ಹಾಗೂ ಕೊರೋನಾ ಲಾಕ್’ಡೌನ್ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿದ್ದಾರೆಂದು ವಲಸೆ ಕಾರ್ಮಿಕರ ಮೇಲೆ ದಾಖಲು ಮಾಡಿರುವ ಎಲ್ಲಾ ಪ್ರಕರಣಗಳೂ ಕೈಬಿಡುವಂತೆ ಸೂಚಿಸಿದೆ.
![](https://prajapragathi.com/wp-content/uploads/2020/06/migrants-pti-140570505-1589658593.gif)