ಮುಂಬೈ:
ಹಿಂದಿ ಚಿತ್ರರಂಗದ ಪ್ರಖ್ಯಾತ ಹಿರಿಯ ನಟರಲ್ಲೊಬ್ಬರಾದ ಶ್ರೀ ಖಾದರ್ ಖಾನ್ ಅವರು ನಿನ್ನೆ ಸಂಜೆ 6 ಗಂಟೆಗೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ವೈಧ್ಯರು ತಿಳಿಸಿದ್ದಾರೆ. ಖಾನ್ ಅವರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.
ಅವರ ಮಗ ಹೇಳುವಂತೆ “ನಮ್ಮ ತಂದೆ ನಮ್ಮನ್ನು ಅಗಲಿ ಬಾರದ ಲೋಕಕ್ಕೆ ತೆರಳಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಕೆನಾಡದ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಿಂದ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದ ಅವರು ತಮ್ಮ ವಯೋಸಹಜ ಗುಣಗಳಿಂದ ಅವರ ಶರೀರ ಕೊಡುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ಇದಿದ್ದರಿಂದ ನಿನ್ನೆ ಮರಣ ಹೊಂದಿದ್ದಾರೆ” ಎಂದು ಕಂಬನಿ ಮಿಡಿದಿದ್ದಾರೆ. ತಂದೆಯವರ ಅಂತ್ಯಕ್ರಿಯೆಯನ್ನು ಕೆನಾಡದಲ್ಲಿ ನಡೆಸಲು ಕುಟುಂಬಸ್ಥರೆಲ್ಲರು ತೀರ್ಮಾನಿಸಿದ್ದೇವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/Unknown_virietis.gif)