ಬಿಜೆಪಿಗೆ ಕೈ ಕೊಟ್ಟ ಹಾಲಿ ಸಂಸದ ..!!

ನವದೆಹಲಿ:

     ದೆಹಲಿಯ ಹಾಲಿ ಸಂಸದರಾಗಿರುವ ಶ್ರೀ ಉದಿತ್ ರಾಜ್ ಇಂದು ಬಿಜೆಪಿಗೆ ಗುಡ್ ಬೈ ಹೇಳಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.

      ರಾಹುಲ್ ಗಾಂಧಿ ಅವರ ಸಮಕ್ಷಮದಲ್ಲಿ ಉದಿತ್ ರಾಜ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಉದಿತ್ ರಾಜ್ ಇಷ್ಟು ದಿನ ದೆಹಲಿಯ ವಾಯುವ್ಯ ಲೋಕಸಭಾ ಕ್ಷೇತ್ರದ ಬಿಜೆಪಿಯ ಸಂಸದರಾಗಿದ್ದರು ಅವರಿಗೆ ಈ ಬಾರಿ ಪಕ್ಷ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಸೇರಿದ್ದಾರೆ.

     ದೆಹಲಿಯ ವಾಯುವ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪಂಜಾಬ್‍ನ ಜನಪದ ಹಾಗೂ ಸೂಫಿ ಗಾಯಕ ಹನ್ಸ್ ರಾಜ್ ಹಸ್ಸ್ ಕಣಕ್ಕೆ ಇಳಿದಿದ್ದಾರೆ. ದೆಹಲಿ ಲೋಕಸಭಾ ಕ್ಷೇತ್ರಗಳ ಮತದಾನವು ಮೇ 12ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿತ್ತು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap