ಪಕ್ಷಕ್ಕೆ ಹೊಸ ಚೈತನ್ಯ ನೀಡಲು ಮುಂದಾದ ಸೋನಿಯಾ ಗಾಂಧಿ.!

ನವದೆಹಲಿ:

    ಕೇಂದ್ರದ ವಿಪಕ್ಷವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಹೊಸ ಶಕ್ತಿ ಉತ್ಸಾಹ ನೀಡಲು ಮೇಜರ್ ಸರ್ಜರಿಗೆ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮುಂದಾಗಿದ್ದಾರೆ. ಶತಮಾನದಷ್ಟು ಹಳೆಯದಾದ ಪಕ್ಷಕ್ಕೆ ಸಾಂಸ್ಥಿಕ, ಹೊಸ ರೂಪ ಕೊಡಲು ದೆಹಲಿ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲು ಸೋನಿಯಾ ಸಜ್ಜಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಶೀಲಾ ದೀಕ್ಷಿತ್ ಅವರ ನಿಧನದ ನಂತರ ದೆಹಲಿಯಲ್ಲಿ ಅಧ್ಯಕ್ಷರ ಹುದ್ದೆ ಖಾಲಿ ಇದ್ದು, ಕಮಲ್ ನಾಥ್ ಅವರು ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿಯಾದ ನಂತರವೂ ಅಧ್ಯಕ್ಷರ ಹುದ್ದೆಯಲ್ಲಿ ಮುಂದುವರಿದಿದ್ದಾರೆ.ರಾಜಸ್ಥಾನದಲ್ಲಿ ಸಚಿನ್ ಪೈಲಟ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಎರಡು ಹುದ್ದೆ ಹುದ್ದೆ ಅಲಂಕರಿಸಿದ್ದಾರೆ. ಅನೇಕ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯಗಳ ಉಸ್ತುವಾರಿಗಳೂ ಸಹ ಬದಲಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap