ನವದೆಹಲಿ
ಶ್ರೀಲಂಕಾದಲ್ಲಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷ ರಾದ ಗೋಟ ಬಯ ರಾಜಪಕ್ಸೆ ಈ ತಿಂಗಳ 29 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂರ್ಕ ಪ್ರಕಟಿಸಿದ್ದಾರೆ.
ಸದ್ಯ ಶ್ರೀಲಂಕಾ ಪ್ರವಾಸದಲ್ಲಿರುವ ಸಚಿವ ಜೈಶಂರ್ಕ ಶ್ರೀ ಲಂಕಾದ ನೂತನ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರನ್ನು ಭೇಟಿ ಮಾಡಿ ಶುಭಕೋರಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು, ಭಾರತಕ್ಕೆ ಭೇಟಿ ನೀಡುವಂತೆ ಕೋರಿರುವ ಆಹ್ವಾನವನ್ನು ರಾಜಪಕ್ಸೆ ಅವರಿಗೆ ಹಸ್ತಾಂತರಿಸಿದರು. ಪ್ರಧಾನಿ ಮೋದಿ ಆಹ್ವಾನಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಜಪಕ್ಸೆ, ಈ ತಿಂಗಳ 29 ರಂದು ಭಾರತ ಪ್ರವಾಸ ಕೈಗೊಳ್ಳುವುದಾಗಿ ಪ್ರಕಟಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/11/Untitled-1-21.gif)