ಉದ್ದಟತನ ನಿಲ್ಲಿಸಿ : ಭಾರತಕ್ಕೆ ಚೀನಾ ಎಚ್ಚರಿಕೆ

ನವದೆಹಲಿ:

    ವಾಸ್ಯಥವಿಕ ಗಡಿ ರೇಖೆಯಲ್ಲಿ ಭಾರತೀಯ ಸೈನಿಕರು ಉದ್ಧಟತನವನ್ನು ನಿಲ್ಲಿಸದೇ ಇದ್ದರೆ ಮುಂದಾಗುವ ಪರಿಣಾಮಗಳನ್ನು ಭಾರತ ಎದುರಿಸಬೇಕಾಗುತ್ತದೆ ಎಂದು ಚೀನಾ ಸರ್ಕಾರದ ಮುಖವಾಣಿ ಗ್ಲೋಬಲ್ ಟೈಮ್ಸ್ ಹೇಳಿದೆ.

    ಪ್ಯಾಂಗಾಂಗ್ ಲೇಕ್ ಬಳಿ ಚೀನಾ ಯೋಧರ ಅತಿಕ್ರಮಣವನ್ನು ಭಾರತೀಯ ಸೈನಿಕರು ಹಿಮ್ಮೆಟಿಸಿದ ಬೆನ್ನಲ್ಲೇ ಗ್ಲೋಬಲ್ ಟೈಮ್ಸ್ ತನ್ನ ಸಂಪಾದಕೀಯದಲ್ಲಿ ಭಾರತದ ವಿರುದ್ಧ ಕಿಡಿಕಾರಿದೆ. ‘ಭಾರತ ಏನಾದರೂ ಚೀನಾ ತಂಟೆಗೆ ಬಂದರೆ 1962ರ ಯುದ್ಧದಲ್ಲಿ ಆದದ್ದಕ್ಕಿಂತ ಹೆಚ್ಚು ನಷ್ಟವನ್ನು ಉಂಟು  ಮಾಡುವುದಾಗಿ ಹೇಳಿದೆ. ಅಲ್ಲದೆ ಭಾರತ ಶಕ್ತಿಶಾಲಿ ಚೀನಾವನ್ನು ಎದುರು ಹಾಕಿಕೊಳ್ಳುತ್ತಿದೆ. ತನಗೆ ಅಮೆರಿಕದಿಂದ ಬೆಂಬಲ ಸಿಗಲಿದೆ ಎಂಬ ಭ್ರಮೆಯನ್ನು ಭಾರತ ಕಾಣುವುದು ಬೇಡ. ನಮ್ಮ ಜೊತೆಗೆ ಭಾರತಕ್ಕೆ ಸ್ಪರ್ಧೆಯೇ ಬೇಕೆಂದಾದರೆ, ಚೀನಾದ ಬಳಿ ಭಾರತಕ್ಕಿಂತ ಹೆಚ್ಚು ಸೇನಾ ಸಾಮರ್ಥ್ಯ ಹಾಗೂ  ಸಲಕರಣೆಗಳಿವೆ. ಭಾರತ ತನ್ನ ಸೇನಾ ಸಾಮರ್ಥ್ಯ ಪ್ರದರ್ಶಿಸಲು ಬಂದರೆ ಚೀನಾದ ಸೇನೆ ಖಂಡಿತ ಭಾರತದ ಸೇನೆಗೆ 1962ರಲ್ಲಿ ಉಂಟುಮಾಡಿದ್ದಕ್ಕಿಂತ ಹೆಚ್ಚು ನಷ್ಟ ಉಂಟುಮಾಡುವುದು ನಿಶ್ಚಿತ ಎಂದು ಪತ್ರಿಕೆ ಗುಡುಗಿದೆ.

     ಆಗಸ್ಟ್ 29-30ರ ದಿನದಂದು, ಅಂದರೆ ಶುಕ್ರವಾರ ರಾತ್ರಿ ಪಾಂಗೋಂಗ್ ಟ್ಸೋ ಸರೋವರದ ದಕ್ಷಿಣ ಭಾಗದಲ್ಲಿ ಚೀನಾದ ಪಿಎಲ್​ಎ ಸೈನಿಕರು ಅತಿಕ್ರಮಣಕ್ಕೆ ಮುಂದಾಗಿದ್ದರೆನ್ನಲಾಗಿದೆ. ಇದನ್ನು ಮೊದಲೇ ಊಹಿಸಿದ್ದ ಭಾರತದ ಭದ್ರತಾ ಪಡೆಗಳು ತತ್​ಕ್ಷಣವೇ ಜಾಗೃತಗೊಂಡು ಚೀನೀ  ಸೈನಿಕರನ್ನು  ಹಿಮ್ಮೆಟ್ಟಿಸಿದ್ದರು. ಪ್ಯಾಂಗೋಂಗ್ ಟ್ಸೋ ಸರೋವರದ ಭಾಗದಲ್ಲಿ ಚೀನೀ ಸೈನಿಕರಿಂದ ಈ ಚಟುವಟಿಕೆ ನಡೆಯಬಹುದು ಎಂದು ಭಾರತದ ಪಡೆಗಳು ಮೊದಲೇ ಅಂದಾಜು ಮಾಡಿದ್ದವು. ಹಾಗಾಗಿ, ನಮ್ಮ ಸೇನಾ ನಿಯೋಜನೆ ಹೆಚ್ಚಿಸಿದೆವು. ವಿವಾದಿತ ಗಡಿ ಸಮೀಪ ನಿಯೋಜನೆಗೊಂಡಿದ್ದ ಸೈನಿಕರು ಗಡಿ  ಯಥಾಸ್ಥಿತಿಯನ್ನು  ಮಾರ್ಪಾಡು ಮಾಡುವ ಚೀನಾ ದುರುದ್ದೇಶವನ್ನು ವಿಫಲಗೊಳಿಸಿದ್ದಾರೆ. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap