ಮಿಸ್ತ್ರಿ ನೇಮಕಕ್ಕೆ ಸುಪ್ರೀಂ ತಡೆ..!

ನವದೆಹಲಿ:

   ದೇಶದ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದಾಗಿರುವ ಟಾಟಾ ಗ್ರೂಪ್ ಗೆ ಸೈರಸ್ ಮಿಸ್ತ್ರಿಯವರ ಮರು ನೇಮಕ ಮಾಡುವಂತೆ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿ(ಎನ್ ಸಿಎಲ್ಎಟಿ) ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. 

   ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಬಿ ಆರ್ ಗವೈ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ನ್ಯಾಯಪೀಠ, ಎನ್ ಸಿಎಲ್ ಎಟಿಯ ತೀರ್ಮಾನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿಯನ್ನು ವಿಚಾರಣೆ ನಡೆಸಲು ಒಪ್ಪಿಕೊಂಡಿದ್ದು ಮಿಸ್ತ್ರಿ ಮತ್ತು ಇತರರಿಗೆ ಇಂದು ನೊಟೀಸ್ ಜಾರಿ ಮಾಡಿದೆ.

    ಎನ್ ಸಿಎಲ್ ಎಟಿ, ಸೈರಸ್ ಇನ್ವೆಸ್ಟ್ ಮೆಂಟ್ ಪ್ರೈವೆಟ್ ಲಿಮಿಟೆಡ್ ಮತ್ತು ಮಿಸ್ತ್ರಿಯವರ ಪರ ಡಿಸೆಂಬರ್ 18ರಂದು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಟಾಟಾ ಸನ್ಸ್ ಪ್ರೈವೆಟ್ ಲಿಮಿಟೆಡ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿತ್ತು.ಇನ್ನು, ಎನ್ ಚಂದ್ರಶೇಖರನ್ ಅವರ ನೇಮಕ ಅಕ್ರಮ ಎಂದು ನ್ಯಾಯಮಂಡಳಿ ಆದೇಶ ನೀಡಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap