ನವದೆಹಲಿ
ಜಾರ್ಖಂಡ್ನ ಕಲ್ಲಿದ್ದಲು ಹಗರಣ ಸಂಬಂಧ ಕೇಂದ್ರ ತನಿಖಾ ದಳ (ಸಿಬಿಐ)ದ ವಿಶೇಷ ನ್ಯಾಯಾಲಯ ಕೇಂದ್ರ ಮಾಜಿ ಸಚಿವ ದಿಲೀಪ್ ರಾಯ್ ಹಾಗು ಇತರೆ ಮೂವರು ಅಪರಾಧಿಗಳಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
1999ರಲ್ಲಿ ಜಾರ್ಖಂಡ್ನ ಕಲ್ಲಿದ್ದಲು ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಅಂದಿನ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಕಲ್ಲಿದ್ದಲು ರಾಜ್ಯ ಸಚಿವರಾಗಿದ್ದ ದಿಲೀಪ್ ರಾಯ್ ಅವರ ಪಿತೂರಿ ಇರುವುದು ಸಾಬೀತಾಗಿತ್ತು.
ಅಕ್ಟೋಬರ್ 6 ರಂದು ದಿಲೀಪ್ ರಾಯ್ ಜೊತೆ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್ ನ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್ವಾಲ್ರನ್ನು ಅಪರಾಧಿಗಳೆಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಭಾರತ್ ಪರಾಶರ್ ತೀರ್ಪು ನೀಡಿತ್ತು. ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣದ ಕುರಿತು ಇಂದು ವಿಚಾರಣೆ ನಡೆಸಿರುವ ಸಿಬಿಐ ಸ್ಪೆಷಲ್ ಕೋರ್ಟ್, ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ