ದೆಹಲಿಯಲ್ಲಿ ಕೊರೋನಾ ಸಮುದಾಯ ಹಂತಕ್ಕೆ : ಆಪ್

ನವದೆಹಲಿ:

       ದೆಹಲಿಯಲ್ಲಿ ಕೊರೋನಾ ಸಮುದಾಯ ಪ್ರಸರಣಾ ಹಂತ ತಲುಪಿದ್ದು, ಕೇಂದ್ರ ಸರ್ಕಾರವೇಕೆ ಈ ಬಗ್ಗೆ ಮೌನವಹಿಸಿದೆ ಮತ್ತು ಇದನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ಆಮ್ ಆದ್ಮಿ ಪಕ್ಷ ಪ್ರಶ್ನೆ ಮಾಡಿದೆ. 

      ಈ ಕುರಿತು ಮಾತನಾಡಿರುವ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರು, ದೆಹಲಿಯಲ್ಲಿ ಕೊರೋನಾ ಸೋಂಕಿನ ಸಂಖ್ಯೆಯನ್ನು ನೋಡಿ, ಪ್ರತೀನಿತ್ಯ ಇಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಈಗಾಗಲೇ ವೈರಸ್ ಸಮುದಾಯ ಹಂತ ತಲುಪಿದೆ. ಆದರೂ ಕೇಂದ್ರ ಸರ್ಕಾರವೇಕೆ ಇದನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.  

ಈಗಾಗಲೇ ದೆಹಲಿ ಆರೋಗ್ಯ ಸಚಿವರು ಕೊರೋನಾ ಎಷ್ಟು ವೇಗದಲ್ಲಿ ಹರಡುತ್ತಿದೆ ಎಂಬುದರ ಮಾಹಿತಿ ನೀಡಿದ್ದಾರೆ. ಸೋಂಕು ಯಾವ ರೀತಿ, ಎಲ್ಲಿ, ಹೇಗೆ ಹರಡಿತು ಎಂಬುದರ ಮಾಹಿತಿಯೇ ತಿಳಿಯದಿದ್ದಾಗ ಅದನ್ನು ಸಮುದಾಯ ಹಂತ ಎಂದು ಕರೆಯಲಾಗುತ್ತಿದೆ. ಕೇಂದ್ರ ಸರ್ಕಾರ ಯಾವುದರ ಆಧಾರದ ಮೇಲೆ ಇನ್ನೂ ಚಿಂತನೆ ನಡೆಸುತ್ತಿದೆ? ಯಾವ ಕಾರಣಕ್ಕೆ ಅವರು ಇದನ್ನು ನಂಬುತ್ತಿಲ್ಲ? ಇದಕ್ಕೆ ಕೇಂದ್ರ ಸರ್ಕಾರ ಉತ್ತರ ನೀಡಬೇಕು ಎಂದು ತಿಳಿಸಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು, ದೆಹಲಿಯಲ್ಲಿ ಕೊರೋನಾ ಸಮುದಾಯ ಹಂತ ತಲುಪಿದೆ ಎಂದು ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಅವರೇ ಒಪ್ಪಿಕೊಂಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಇದನ್ನು ಒಪ್ಪಿಕೊಳ್ಳುತ್ತಿಲ್ಲ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap